ಸಿಎಂ ಗೆ ಉದ್ಯೋಗ ಸೃಸ್ಟಿಸುವಂತೆ ವಿನಂತಿಸಿ ನೇಣಿಗೆ ಶರಣಾದ ವಿದ್ಯಾರ್ಥಿ!

Public TV
1 Min Read

ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜ್ಯದಲ್ಲಿ ವಿದ್ಯಾವಂತ ಯುವಕರಿಗೆ ಉದ್ಯೋಗ ಸೃಸ್ಟಿ ಮಾಡುವಂತೆ ವಿನಂತಿಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ವಿಶ್ವವಿದ್ಯಾಲಯ ದಲ್ಲಿ ಎಂಎ ಓದುತ್ತಿದ್ದ ಚನ್ನಗಿರಿ ತಾಲೂಕಿನ ಹೊಸ ನಗರ ಗ್ರಾಮದ ನಿವಾಸಿಯಾದ ಅನಿಲ್.ಬಿ (22)ಎಂಬವನೇ ನೇಣಿಗೆ ಶರಣಾದ ವಿದ್ಯಾರ್ಥಿ.

ಸರ್ಕಾಗಳು ಯುವಜನತೆಗೆ ಅನ್ಯಾಯ ಮಾಡುತ್ತಿವೆ. ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಇದರಿಂದ ಸರ್ಕಾರ ಯುವಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಮನನೊಂದು ನೇಣಿಗೆ ಶರಣಾಗುತ್ತೇನೆ ಎಂದು ವಿಡಿಯೋ ಹೇಳಿದ್ದಾನೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಜನಾಂಗಕ್ಕೆ ಉದ್ಯೋಗ ಸೃಸ್ಟಿ ಮಾಡುವಲ್ಲಿ ವಿಫಲವಾಗಿವೆ. ಇದರಿಂದ ವಿದ್ಯಾವಂತರು ಕೂಲಿ ಮಾಡುವಂತಾಗಿದೆ. ಈ ನನ್ನ ಪರಿಸ್ಥಿತಿ ನನ್ನಂತಹ ಬಡವರಿಗೆ ಮಾತ್ರ ಅರ್ಥವಾಗುತ್ತದೆ. ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸಿ ಎಂದು ಯುವಕ ಅನಿಲ್ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಈ ನನ್ನ ಸಾವಿನಿಂದಾದರೂ ಎಚ್ಚೆತ್ತು ಸರ್ಕಾರ ವಿದ್ಯಾವಂತರಿಗೆ ಉದ್ಯೋಗ ಸೃಸ್ಟಿಮಾಡಲಿ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಸವ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *