ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಸಾರ್ವಜನಿಕರಿಂದಲೇ ಧರ್ಮದೇಟು

Public TV
1 Min Read

ಧಾರವಾಡ: ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕರೇ ಧರ್ಮದೇಟು ನೀಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಗಣಿತ ಶಿಕ್ಷಕ ಗಂಡು ಮಕ್ಕಳನ್ನು ತರಗತಿಯಿಂದ ಹೊರಗೆ ಕಳುಹಿಸಿ, ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲದೇ ತನ್ನ ಕೃತ್ಯವನ್ನು ಪೋಷಕರಿಗೆ ತಿಳಿಸಿದರೆ ಅವರನ್ನು ಕೊಲೆ ಮಾಡುವುದಾಗಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದು ಬಂದಿದೆ.

ಶಿಕ್ಷಕ ವಿದ್ಯಾರ್ಥಿನಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಕೃತ್ಯದ ಬಗ್ಗೆ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದರೂ ಪ್ರಯೋಜನ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಂಗೆಟ್ಟ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ ಆಡಳಿತ ಮಂಡಳಿ ಅಧ್ಯಕ್ಷರು ಗಂಭೀರವಾಗಿ ಪರಿಗಣಿಸದೇ ಶಿಕ್ಷಕನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಇದರಿಂದ ರೋಸಿ ಹೋದ ಸಾರ್ವಜನಿಕರು ಇದ್ದಕ್ಕಿದ್ದಂತೆ ಶಾಲೆಗೆ ಬಂದು ಶಿಕ್ಷಕನಿಗೆ ಗೂಸಾ ಕೊಟ್ಟಿದ್ದಾರೆ.

ಈ ವೇಳೆ ಶಿಕ್ಷಕ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ತನ್ನ ತಪ್ಪಿನ ಕುರಿತು ಶಾಲಾ ಆಡಳಿತ ಮಂಡಳಿಗೆ ಲಿಖಿತ ರೂಪದಲ್ಲಿ ಪತ್ರ ಬರೆದುಕೊಟ್ಟಿದ್ದಾನೆ. ಶಾಲಾ ಆಡಳಿತ ಮಂಡಳಿಯು ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *