ಮಾಜಿ ಸಂಸದರ ಪತ್ನಿಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳನ ಬಂಧನ

Public TV
1 Min Read

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಮಾಜಿ ಸಂಸದನ ಮನೆಗೆ ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ನೀರು ಕೊಡಲು ಬಂದ ಮಾಜಿ ಸಂಸದನ ಪತ್ನಿಯ ಬಂಗಾರದ ಸರವನ್ನು ಹರಿದು ಪರಾರಿಯಾಗಿದ್ದ ಕಳ್ಳನನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಹಾನಗಲ್ ಮೂಲದ ಪರಶುರಾಮ ಸಣ್ಣಮನಿ ಎಂಬ ವ್ಯಕ್ತಿ. ಈತನಿಂದ 1,85೦೦೦ ಮೌಲ್ಯದ 37ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಕೃತ್ಯಕ್ಕೆ ಬಳಸಿದ 15,೦೦೦ರೂ. ಮೌಲ್ಯದ ಬಜಾಜ್ ಡಿಸ್ಕವರ್ ಬೈಕ್ ವಶಕ್ಕೆ ಪಡೆಯಲಾಗಿದೆ.

ಘಟನೆ ಏನು?: ಕಾಂಗ್ರೆಸ್ ನಿಂದ ನಾಲ್ಕು ಬಾರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದ ದೇವರಾಯ ನಾಯ್ಕರವರ ಪತ್ನಿ ಗೀತಾರವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿ ನೀರು ಕೇಳುವ ನೆಪ ಮಾಡಿಕೊಂಡು, ಅವರ ಕುತ್ತಿಗೆಯಲ್ಲಿ ಸರವನ್ನು ಕಸಿದುಕೊಂಡು ಹೋಗಿದ್ದನು. ಇದನ್ನೂ ಓದಿ: ಮಗು ಮಾಡಿಕೊಳ್ಳುವ‌ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?

ತಕ್ಷಣ ಕಾರ್ಯಪ್ರವೃತ್ತರಾದ ಶಿರಸಿ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಸಿಪಿಐ ರಾಮಚಂದ್ರ ನಾಯ್ಕ ನೇತೃತ್ವದಲ್ಲಿ ತಂಡ ರಚಿಸಿ ಕೊನೆಗೂ ಆರೋಪಿಯನ್ನು ಹಾವೇರಿ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್