ಬೆಳಗಾವಿ: ಎಮ್ಮೆ ಕೋಣ ಕಡಿಯುವುದಾದರೆ, ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರ ಚರ್ಚೆ ಮಾಡಲು ಸದನ ಇದೆ. ಗೋಹತ್ಯೆ ನಿಷೇಧ ಕಾಯ್ದೆಯ (Cow Slaughter Act) ಬಗ್ಗೆ ಸರ್ಕಾರ ಸೂಕ್ತ ನಿಧಾರ ಕೈಗೊಳ್ಳಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬೆಳಗಾವಿಯಲ್ಲಿ (Belagavi) ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯ (Congress Guarantee) ಬಗ್ಗೆ ಇಲ್ಲ ಸಲ್ಲದ ಅಪವಾದ ಮಾಡುತ್ತಿದ್ದಾರೆ. ಅವರ ಪಕ್ಷ ಸೋಲಿನಿಂದ ಕಂಗೆಟ್ಟಿದೆ. ಅದನ್ನು ಮರೆಸಲು ಹೊಸ ಹೊಸ ವಿಚಾರವನ್ನು ಜನರ ಮುಂದಿಡುತ್ತಿದೆ. ಇಲ್ಲಿಯವರೆಗೆ ಗ್ಯಾರಂಟಿ ವಿಚಾರವಾಗಿ ಮಾತನಾಡುತ್ತಿದ್ದರು. ಈಗ ಗೋಹತ್ಯೆ ವಿಚಾರವನ್ನು ಚರ್ಚೆಗೆ ತಂದಿದ್ದಾರೆ. ಇದೇ ರೀತಿ ಹೊಸ ಹೊಸ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರೈಲು ದುರಂತದ ಬೆನ್ನಲ್ಲೇ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಘೋಷಿಸಿದ ಒಡಿಶಾ ಸಿಎಂ
ಗೊಹತ್ಯೆ ಕಾಯ್ದೆ ವಿಚಾರವಾಗಿ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಐದು ವರ್ಷ ಹೋರಾಟವೇ ಗತಿ. ಅವರಿಗೆ ಬೇರೆ ಕೆಲಸವಿಲ್ಲ. ಕೊಮುದ್ವೇಷ ಹರಡುವುದೇ ಅವರ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ. ನಾಲ್ಕು ವರ್ಷ ಒಂದು ಉತ್ತಮ ಕೆಲಸ ಮಾಡಿಲ್ಲ ಈಗ ಗೆದ್ದ ಕೆಲವು ಬಿಜೆಪಿ ಶಾಸಕರಾದರೂ ಒಳ್ಳೆಯ ಕೆಲಸ ಮಾಡಲಿ ಎಂದಿದ್ದಾರೆ.
ಕರ್ನಾಟಕದ ಗ್ಯಾರಂಟಿ ಯೋಜನೆ ಬೇರೆ ರಾಜ್ಯಗಳಿಗೂ ಮಾದರಿ ಆಗಲಿದೆ. ಈ ಮೂಲಕ ಕರ್ನಾಟಕ ಮಾಡೆಲ್ ಹೆಸರು ಫೇಮಸ್ ಆಗಲಿದೆ ಎಂದಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು