ವ್ಯಕ್ತಿ ಕೆರೆಯಲ್ಲಿ ಸಾವನ್ನಪ್ಪಿದ್ದಕ್ಕೆ ನೀರು ಖಾಲಿ ಮಾಡ್ತೀರೋ ಗ್ರಾಮಸ್ಥರು

Public TV
1 Min Read

ಧಾರವಾಡ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಗ್ರಾಮಸ್ಥರು ನೀರನ್ನು ಖಾಲಿ ಮಾಡಿದ್ದಾರೆ.

ಜಿಲ್ಲೆಯ ನವಲಗುಂದ ತಾಲೂಕಿನ ನಾವಳ್ಳಿ ಗ್ರಾಮದ ಗ್ರಾಮಸ್ಥರು ಕೆರೆಯ ನೀರನ್ನು ಕಳೆದ ಮೂರು ದಿನಗಳಿಂದ ಖಾಲಿ ಮಾಡುತ್ತಿದ್ದಾರೆ. ಜೂನ್ 15ರಂದು ಪರಶುರಾಮ್ ತಳವಾರ ಎಂಬ ವ್ಯಕ್ತಿ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದನು. ಗ್ರಾಮಸ್ಥರು ಕೆರೆಯ ನೀರನ್ನು ಕುಡಿಯಲು ಬಳಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೀರನ್ನು ಕೆರೆಯಿಂದ ಖಾಲಿ ಮಾಡಲಾಗಿದೆ.

ಕಳೆದ ಮೂರು ದಿನಗಳಿಂದ ಒಟ್ಟು 13 ಮೋಟಾರ್ ಹಚ್ಚಿ ನೀರನ್ನು ಗ್ರಾಮಸ್ಥರು ಹೊರ ಹಾಕಿದ್ದಾರೆ. ಇತ್ತೀಚೆಗೆ ಕಾಲುವೆ ಮೂಲಕ ಕೆರೆಗೆ ನೀರನ್ನು ಹರಿಸಲಾಗಿದ್ದರಿಂದ ಬಹು ವರ್ಷಗಳ ನಂತರ ಭರ್ತಿಯಾಗಿತ್ತು. ಆದ್ರೆ ವ್ಯಕ್ತಿ ಸಾವನ್ನಪ್ಪಿದ್ದರಿಂದ ಗ್ರಾಮಸ್ಥರು ಕೆರೆಯ ನೀರನ್ನು ಕುಡಿಯಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಎಲ್ಲರ ಒಮ್ಮತದ ಮೇರೆಗೆ ನೀರನ್ನು ಪುನಃ ಕಾಲುವೆಗೆ ಹರಿಸಲಾಗಿದೆ.

ಮುಂದಿನ ದಿನಗಳಲ್ಲಿ ವರುಣದೇವ ಕೃಪೆ ತೋರಿದರೆ ಕೆರೆ ತುಂಬುವ ಸಾಧ್ಯತೆಗಳಿವೆ. ಜಿಲ್ಲಾಡಳಿತ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಮತ್ತೊಮ್ಮೆ ನೀರು ಹರಿಸಬೇಕಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *