13 ಮನೆ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್ – 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Public TV
1 Min Read

ಮಂಗಳೂರು: ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಿಚಾರಿಸಿದ ವೇಳೆ ಈತ ದಕ್ಷಿಣ ಕನ್ನಡದ ಹಲವು ಕಡೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಶಂಕರಪುರ ನಿವಾಸಿ ಶೌಕತ್ ಯಾನೆ ಶೌಕತ್ ಅಲಿ (56) ಬಂಧಿತ ಆರೋಪಿ. ಈತ ಮಾಣಿ ಗ್ರಾಮದ ಅಳಿರಾ ಎಂಬಲ್ಲಿ ವಾಸವಿದ್ದ. ಪುತ್ತೂರು, ಉಪ್ಪಿನಂಗಡಿ ಹಾಗೂ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 13 ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

2017ರ ಬಳಿಕ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ನಡೆದ ಹೆಚ್ಚಿನ ಮನೆಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಆದರ್ಶನಗರ, 34 ನೆಕ್ಕಿಲಾಡಿ, ಕಲ್ಲೇರಿ, ಕೆಂಪಿಮಜಲು, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಅಜೇಯನಗರ, ಮುರ, ಬನ್ನೂರು, ಹಾರಾಡಿ, ಕೋಡಿಂಬಾಡಿ, ಜೈನರಗುರಿ, ಸಾಲ್ಮರ, ದಾರಂದಕುಕ್ಕು ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯ ಕಲ್ಲಡ್ಕಗಳಲ್ಲಿ ನಡೆದ ಮನೆ ಕಳವು ಪ್ರಕರಣಗಳಲ್ಲಿ ಈತನೇ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ ವಿವಿಧೆಡೆಯಿಂದ ಕಳ್ಳತನ ಮಾಡಿದ್ದ ಒಟ್ಟು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಕಳ್ಳತನ ಮಾಡಿ ಮಾರಿದ್ದ ಚಿನ್ನವನ್ನು ಉಪ್ಪಿನಂಗಡಿಯ 2 ಹಾಗೂ ಬಂಟ್ವಾಳದ ಒಂದು ಜ್ಯುವೆಲ್ಲರಿಯಿಂದ ವಶಕ್ಕೆ ಪಡೆಯಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *