ದೇವಾಲಯದ ಕಾಣಿಕೆ ಹುಂಡಿ ಒಡೆದು ಹಣ ದೋಚಿ ಪರಾರಿಯಾದ ಕಳ್ಳರು

Public TV
1 Min Read

ಹಾವೇರಿ: ನಸುಕಿನಲ್ಲಿ ದೇವಸ್ಥಾನದ ಹುಂಡಿಯನ್ನು ಒಡೆದು ಹಣ ಕಳ್ಳತನ ಮಾಡಿರುವ ಘಟನೆ ಜಿಲ್ಲೆ ಹಿರೇಕೆರೂರು ತಾಲೂಕು ವಡೆಯರಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಆರಾಧ್ಯ ದೈವ ಆಂಜನೇಯ ಸ್ವಾಮಿ ಕಾಣಿಕೆ ಹುಂಡಿಯ ಕೆಳಭಾಗದಲ್ಲಿದ್ದ ಬೀಗ ಮುರಿದು ಕಳ್ಳರು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕಾಣಿಕೆಯ ಹಣವನ್ನ ಆಡಳಿತ ಮಂಡಳಿ ತೆಗೆದಿರಲಿಲ್ಲ.

ಹುಂಡಿಯಲ್ಲಿ ಸುಮಾರು 15 ಸಾವಿರಕ್ಕೂ ನಗದು ಇತ್ತು ಎನ್ನಲಾಗಿದೆ. ಅಲ್ಲದೇ ಈ ಹಿಂದೆ ಎರಡು ಬಾರಿಯೂ ದೇವಸ್ಥಾನದ ಹುಂಡಿಯ ಹಣ ಕಳ್ಳತನವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕಳ್ಳರನ್ನ ಪತ್ತೆಹಚ್ಚಿ ಶಿಕ್ಷೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *