ಅಂಗವಿಕಲ ವೃದ್ಧೆಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

Public TV
1 Min Read

ಬೆಂಗಳೂರು: ಅಂಗವಿಕಲ ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ನಾರಾಯಣಸ್ವಾಮಿ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು. ನಾರಾಯಣಸ್ವಾಮಿ ಹಾಗೂ ಮಂಜುನಾಥ್ ಬಾಗೇಪಲ್ಲಿಯವರಾಗಿದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಆನೇಕಲ್ ಪಟ್ಟಣದ ಮನೆಯಲ್ಲಿ ಅಂಗವಿಕಲ ಒಂಟಿ ಮಹಿಳೆ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕೈಕಾಲು ಕಟ್ಟಿ ಚಿನ್ನ, ಬೆಳ್ಳಿ ಹಾಗೂ ಒಂದು ಲಕ್ಷ ರೂ. ದೋಚಿ ಪರಾರಿಯಾಗಿದ್ದರು.

ಈ ಪ್ರಕರಣದ ಸಂಬಂಧ ದೂರು ದಾಖಲಿಸಿಕೊಂಡ ಆನೇಕಲ್ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ, ಈ ವೇಳೆ ಆರೋಪಿಗಳು ಕಳ್ಳತನ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದು, ಬಂಧಿತ ಆರೋಪಿಗಳಿಂದ ಕದ್ದೊಯ್ದಿದ್ದ ಚಿನ್ನ, ಬೆಳ್ಳಿ ಹಾಗೂ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಜೈಲಿಗೆ ಅಟ್ಟುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *