ಬೀಗ ಒಡೆದು ದರೋಡೆ ಮಾಡುತ್ತಿದ್ದ ನಾಲ್ವರು ಕಳ್ಳರ ಬಂಧನ

Public TV
1 Min Read

ಬೆಳಗಾವಿ: ಬೀಗ ಒಡೆದು ದರೋಡೆ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಸ್ಥಳೀಯರು ಹಿಡಿದು  ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ನಡೆದಿದೆ.

ರಾಮನಗರ ಬಡಾವಣೆಯ ಚನ್ನಬಸವ ಎಂಬವರ ಮನೆಯ ಬೀಗ ಒಡೆಯುತ್ತಿದ್ದ ವೇಳೆ ಸ್ಥಳೀಯರಿಗೆ ಈ ನಾಲ್ವರು ಕಳ್ಳರು ಸಿಕ್ಕಿಬಿದ್ದಿದ್ದಾರೆ. ಸ್ಥಳೀಯರ ಸಹಾಯದಿಂದ ನಾಲ್ವರು ದರೋಡೆಕೋರರನ್ನು ನಿಪ್ಪಾಣಿ ನಗರದ ಬಸವೇಶ್ವರ ವೃತ್ತ ಪೊಲಿಸರು ಬಂಧಿಸಿದ್ದಾರೆ.

ಬಂಧಿತರಿಂದ ಒಂದು ಸ್ಕಾರ್ಪಿಯೋ ವಾಹನ, ಕಂಟ್ರಿ ಪಿಸ್ತೂಲ್, ಮೊಬೈಲ್‍ಗಳು ವಶಪಡಿಸಿಕೊಳ್ಳಲಾಗಿದೆ. ಈ ಬಂಧಿತ ನಾಲ್ವರು ಮಹಾರಾಷ್ಟ್ರದ ಬೀಡ್ ಪಟ್ಟಣ ಹಾಗೂ ಸುತ್ತಮುತ್ತಲಿನ ನಿವಾಸಿಗಳಾಗಿದ್ದು, ಕರ್ನಾಟಕ ಹಾಗೂ ಮಹಾರಾಷ್ಟ್ರದ ಹಲವು ಕಡೆಗೆ ದರೋಡೆ ಮಾಡಿದ್ದಾರೆ ಎನ್ನಲಾಗಿದೆ.

ನಿಪ್ಪಾಣಿ ಬಸವೇಶ್ವರ ವೃತ್ತ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *