ಹೆಸರು ಬದಲಾವಣೆ ಬಿಟ್ಟು ಇಂಡಿಯಾ ಸಭೆಯಿಂದ‌ ಏನು ಪ್ರಯೋಜನ ಆಗಿಲ್ಲ: ಕುಮಾರಸ್ವಾಮಿ

By
1 Min Read

ಬೆಂಗಳೂರು: ಹೆಸರು ಬದಲಾವಣೆ ಬಿಟ್ಟು ಇನ್ನೇನು ಅನುಕೂಲ ಇಂಡಿಯಾ (INDIA) ಸಭೆಯಿಂದ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (Kumaraswamy) ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಗೆ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ (UPA) ಮೈತ್ರಿಕೂಟಕ್ಕೆ ಇಂಡಿಯಾ ಎಂಬ ನಾಮಕರಣ ಮಾಡಿರುವ ಬಗ್ಗೆ ನಾನು ಯಾಕೆ ಹಗುರವಾಗಿ ಮಾತನಾಡಲಿ. ನಿನ್ನೆ ದಿನ ಯುಪಿಎ ಬದಲಾವಣೆ ಮಾಡಿಕೊಂಡು ಇಂಡಿಯಾ ಅಂತ ಇಟ್ಟಿದ್ದಾರೆ. ಅದು ಅವರಿಗೆ ಸೇರಿದ್ದು, ಹೆಸರು ಇಟ್ಟ ತಕ್ಷಣ ನಾಡಿನ ಸಮಸ್ಯೆ ಬಗೆಹರಿಯಲ್ಲ ಅಂತ ಕಿಡಿಕಾರಿದರು. ಇದನ್ನೂ ಓದಿ: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬೊಮ್ಮಾಯಿ

 

ಕಾಂಗ್ರೆಸ್ (Congress) ಇಷ್ಟು ದೊಡ್ಡ ಮಟ್ಟದಲ್ಲಿ ರಾಜಕೀಯ ಸಭೆ ಮಾಡಿ ಜನರ ಮೇಲೆ ಹೊರೆ ಹೊರಿಸಿ ಮಾಡಿರುವ ಕಾರ್ಯಕ್ರಮ ಇದು. ಕೊನೆಗೆ ಏನು ಸಂದೇಶ ನೀಡಿದ್ದಾರೆ. ನಾವು ಕಾಂಗ್ರೆಸ್ ನವರು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಅಂತ ಹೇಳಿದ್ದಾರೆ. ಅದು ಬಿಟ್ಟು ಇನ್ನೇನು ಆಗಿಲ್ಲ ವ್ಯಂಗ್ಯವಾಡಿದರು.

ಸಂವಿಧಾನದ ಪ್ರಕಾರ ಇಂಡಿಯಾ ಎಂಬ ಹೆಸರು ಇಡುವಂತಿಲ್ಲ ಎಂಬ ವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಯಾರಾದರೂ ಕೋರ್ಟ್ ಹೋಗ್ತಾರಾ ಏನು ಮಾಡ್ತಾರೆ ಮುಂದೆ ನೋಡೋಣ. ಅವರು ಏನೋ ಹೆಸರು ಇಟ್ಟುಕೊಂಡಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ ಎಂದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್