ಬೆಳಗಾವಿಯಲ್ಲಿ ರಾಜಕಾರಣವೇ ಇಲ್ಲ: ಜಾರ್ಜ್

Public TV
1 Min Read

ಚಿಕ್ಕಮಗಳೂರು: ಬೆಳಗಾವಿಯಲ್ಲಿ (Belagavi) ರಾಜಕಾರಣವೇ ಇಲ್ಲ. ಎಲ್ಲಿದೆ? ಅಲ್ಲಿ ರಾಜಕಾರಣವೇ ಇಲ್ಲ. ಯಾರೋ ಏನೋ ಹೇಳಿದರೆ ಅದಲ್ಲ ರಾಜಕಾರಣ. ಚುನಾವಣೆ ಫಲಿತಾಂಶ ಏನಿದೆ, ಅದು ರಾಜಕಾರಣ (Politics) ಎಂದು ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ (KJ George) ಹೇಳಿದ್ದಾರೆ.

ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಸುರ್ಜೇವಾಲ ಹಾಗೂ ವೇಣುಗೋಪಾಲ್ ಸಭೆ ನಡೆಸುತ್ತಿದ್ದು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಭೆ ಮಾಡುವುದು ಸರ್ವೇ ಸಾಮಾನ್ಯ. ಅದು ನಿರಂತರ ಪ್ರಕ್ರಿಯೆ. ಕಾಂಗ್ರೆಸ್ (Congress) ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಇದನ್ನೂ ಓದಿ: ನಮ್ಮ ಬಸ್‌ಗೆ ಹಾನಿ ಮಾಡಿದವರ ಮೇಲೆ ಕ್ರಮ, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ: ರಾಮಲಿಂಗಾರೆಡ್ಡಿ

ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಲು ಅವಕಾಶವಿದೆ. ಮುಕ್ತವಾಗಿ ಹೇಳಬಹುದು. ತೀರ್ಮಾನವನ್ನು ಸಿಎಂ, ಡಿಸಿಎಂ, ಹೈಕಮಾಂಡ್ ನೋಡಿಕೊಳ್ಳುತ್ತದೆ. ಬೆಳಗಾವಿಯಲ್ಲಿ ರಾಜಕಾರಣವೇ ಇಲ್ಲ. ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಏನಾಯಿತೋ ಅದೇ ರಾಜಕಾರಣ ಎಂದು ಬೆಳಗಾವಿ ರಾಜಕೀಯಕ್ಕೆ ಟಾಂಗ್ ಕೊಟ್ಟರು. ಇದನ್ನೂ ಓದಿ: Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿ

ಕಾಂಗ್ರೆಸ್ಸಿನಲ್ಲಿ ಯಾವುದೇ ಅಸಮಾಧಾನ ಇಲ್ಲ. ಕಾಂಗ್ರೆಸ್ಸಿನ ನಾವೆಲ್ಲಾ ಒಗ್ಗಟ್ಟಿನಿಂದ ಇದ್ದೇವೆ. ಕಾಂಗ್ರೆಸ್ ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಇಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ಹೇಳಲು ಅವಕಾಶವಿದೆ. ತೀರ್ಮಾನ ದೊಡ್ಡವರಿಗೆ ಬಿಟ್ಟದ್ದು. ಇನ್ನು ರಾಜ್ಯದಲ್ಲಿ ಎಂ.ಇ.ಎಸ್. ಪುಂಡಾಟಿಕೆ ಏನೂ ನಡೆಯಲ್ಲ. ಕಾನೂನಿಗೆ ಎಲ್ಲರೂ ಒಂದೇ. ಯಾರೇ ಯಾವುದೇ ರೀತಿಯ ತೊಂದರೆ ಮಾಡಿದರೂ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರು 2-3 ತಿಂಗಳಲ್ಲಿ ವಾಪಸ್ ಮಾಡಬೇಕು: ಡೆಡ್‌ಲೈನ್ ನೀಡಿದ ಖಂಡ್ರೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್