ಧರ್ಮದ ವಿಚಾರದಲ್ಲಿ ದ್ವೇಷ, ನೋವುಂಟು ಮಾಡಬಾರದು: ಯು.ಟಿ ಖಾದರ್

Public TV
1 Min Read

ಮಂಗಳೂರು: ಧರ್ಮದ ವಿಚಾರದಲ್ಲಿ ದ್ವೇಷ, ನೋವುಂಟು ಮಾಡಬಾರದು. ಪ್ರೀತಿ ಸಹೋದರತೆಯನ್ನು ಬೆಳೆಸಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ (U.T Khader) ಪ್ರತಿಕ್ರಿಯಿಸಿದ್ದಾರೆ.

ಧರ್ಮಗಳ ಬಗ್ಗೆ ಅವಹೇಳನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ಧರ್ಮಕ್ಕೂ ಅದರದ್ದೇ ಆದ ಮಹತ್ವವಿದೆ, ಗೌರವವಿದೆ. ಎಲ್ಲಾ ಧರ್ಮವೂ ಪ್ರೀತಿ, ವಿಶ್ವಾಸ, ಸಹೋದರತೆಯನ್ನು ತಿಳಿಸುತ್ತದೆ. ಇದನ್ನು ಹೊರತುಪಡಿಸಿ ದ್ವೇಷವನ್ನು ಎಲ್ಲಿಯೂ ತಿಳಿಸುವುದಿಲ್ಲ. ಎಲ್ಲಾ ಧರ್ಮಗಳು ಸಮಾಜವನ್ನು ಒಗ್ಗಟ್ಟು ಮಾಡುವ ಸಂದೇಶ ಕೊಡುತ್ತೆ. ಬಿಕ್ಕಟ್ಟು ಮಾಡುವ ಸಂದೇಶ ಯಾವ ಧರ್ಮವೂ ನೀಡಲ್ಲ ಎಂದರು.

ಮಾನವೀಯತೆ, ಕರುಣೆ, ಪ್ರೀತಿ ವಿಶ್ವಾಸ, ಸಹೋದರತೆ, ಕ್ಷಮೆ ಇದಕ್ಕೆ ಸೀಮಿತವಾಗಿರಬೇಕು. ನೆಮ್ಮದಿಯ ಜೀವನ ನಡೆಸುವ ಅವಕಾಶ ಎಲ್ಲಾ ಧರ್ಮ ಕೊಡುತ್ತೆ. ಯಾರು ಏನು ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ನಾವು ನಮ್ಮ ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ ಇನ್ನಿತರ ಧರ್ಮವನ್ನು ಗೌರವಿಸಬೇಕು ಎಂದು ಖಾದರ್ ತಿಳಿಸಿದರು. ಇದನ್ನೂ ಓದಿ: ನಿನ್ನನ್ನು ಚಂದ್ರಯಾನ-4ರಲ್ಲಿ ಕಳುಹಿಸುತ್ತೇನೆ: ಮಹಿಳೆ ಮನವಿಗೆ ಖಟ್ಟರ್ ಹಾಸ್ಯ

ಸರ್ವ ಜನರ ಪ್ರೀತಿಗೆ ಪಾತ್ರರಾಗಿ ದೇವರ ಪ್ರೀತಿಗೆ ಪಾತ್ರರಾಗಬೇಕು. ಒಂದಿಬ್ಬರು ಹೇಳುವ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ. ಒಗ್ಗಟ್ಟಿನ ಸಮಾಜ ನಿರ್ಮಾಣ ಆಗಬೇಕು ಎಂದು ಹೇಳಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್