ಕಾರು, ಜೀಪ್ ಕದಿಯುತ್ತಿದ್ದ ಕಳ್ಳನನ್ನು ಮರಕ್ಕೆ ಕಟ್ಟಿ ಬಿತ್ತು ಸಖತ್ ಗೂಸಾ

Public TV
0 Min Read

ವಿಜಯಪುರ: ಹಲವಾರು ದಿನಗಳಿಂದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

ಮುದ್ದೇಬಿಹಾಳ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಸಿಕಂದರ್ ನಾಯ್ಕೋಡಿ ಎಂಬ ಯುವಕ ನಿಲ್ದಾಣದಲ್ಲಿ ನಿಲ್ಲುತ್ತಿದ್ದ ಕಾರು, ಜೀಪ್ ಸೇರಿದಂತೆ ಇತರೆ ವಾಹನಗಳಲ್ಲಿನ ಸಾಮಗ್ರಿಗಳನ್ನು ಕದಿಯುತ್ತಿದ್ದ.

ಹೀಗಾಗಿ ರವಿವಾರ ಅದೇ ರೀತಿ ಕದಿಯಲು ಬಂದಾಗ ರೆಡ್ ಹ್ಯಾಂಡ್ ಆಗಿ ಸಿಕಂದರ್ ಸ್ಥಳೀಯರಿಗೆ ಸಿಕ್ಕಿದ್ದಾನೆ. ಆಗ ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಮುದ್ದೇಬಿಹಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *