ಬಾಡಿಗೆ ಮನೆ ಕೇಳೋ ನೆಪದಲ್ಲಿ ಸರ ಕದಿಯಲು ಯತ್ನಿಸಿದಾತನಿಗೆ ಬಿತ್ತು ಗೂಸ!

Public TV
1 Min Read

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕದಿಯಲು ಯತ್ನಿಸಿದ ಕಳ್ಳನನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನೆಲಮಂಗಲ ತಾಲೂಕಿನ ಭೈರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಿವಾಸಿ ಲೋಪಾಕ್ಷಿ ಸರ ಕಳವು ಮಾಡಿ ಈಗ ಸಾರ್ವಜನಿಜಕರಿಂದ ಹೊಡೆತ ತಿಂದಿದ್ದಾನೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಭೈರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮನೆ ಒಡತಿ ಪ್ರೇಮಾ ಎಂಬುವವರ ಸರವನ್ನು ಕಳುವು ಮಾಡಲು ಯತ್ನಿಸಿದಾಗ ಕಳ್ಳ ಸಿಕ್ಕಿ ಬಿದ್ದಿದ್ದಾನೆ.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ಆತ ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪ್ರೇಮಾ ಅವರು ಕಿರುಚಿದಾಗ ಜನರು ಸರಗಳ್ಳನನ್ನು ಹಿಡಿದು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸರ ವಶದಲ್ಲಿ ಲೋಪಾಕ್ಷಿ ಇದ್ದು, ವಿಚಾರಣೆ ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *