ಕರ್ಮ ಅಂದರೆ ಇದು: ಮಾಜಿ ಸಿಎಂ ವಿರುದ್ಧ ಶೋಭಾ ವ್ಯಂಗ್ಯ

Public TV
1 Min Read

ಬೆಂಗಳೂರು: ಅಂದು ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ತಾಯಿ ತಮ್ಮ ಮಗನ ಸಾವಿನ ನ್ಯಾಯಕ್ಕಾಗಿ ವಿಧಾನಸೌಧದ ಬಳಿ ಪ್ರತಿಭಟನೆ ಮಾಡಿದ್ದರು. ಇಂದು ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇಂದು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಪ್ರಮಾನವಚನ ಸ್ವೀಕಾರ ಮಾಡಿದ್ದ ಬೆನ್ನಲೇ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕುಳಿತ್ತಿದ್ದ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿ ಟ್ವೀಟ್ ಮಾಡಿ, “ಡಿಯರ್ ಸಿದ್ದರಾಮಯ್ಯ ಅವರೇ ಇದು ಕರ್ಮ ಅಂದರೆ. ಅಂದು ಡಿ.ಕೆ ರವಿ ಅವರ ತಾಯಿ ಗೌರಮ್ಮ ತನ್ನ ಮಗನ ಸಾವಿನ ನ್ಯಾಯಕ್ಕಾಗಿ ಕಣ್ಣೀರಿಟ್ಟು ಪ್ರತಿಭಟನೆ ಮಾಡಿದ್ದರು. ಇಂದು ನೀವು ಅವರ ಮಾರ್ಗವನ್ನೇ ಅನುಸರಿಸಿದ್ದೀರಿ” ಎಂದು ಬರೆದು ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.

ಡಿ.ಕೆ ರವಿ ಪೋಷಕರು ಮಗನ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ಮಗನ ಸಾವಿನ ಪ್ರಕರಣವನ್ನು ನ್ಯಾಯವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಆರಂಭಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿ ರವಿ ಅವರ ತಾಯಿ ಗೌರಮ್ಮ ಜೊತೆ ಮಾತನಾಡಿ ಸಿಬಿಐ ತನಿಖೆಗೆ ವಹಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.

https://twitter.com/ShobhaBJP/status/996987838850678784

Share This Article
Leave a Comment

Leave a Reply

Your email address will not be published. Required fields are marked *