ಒಂದು ಅಡಿ ಮುಂದೆ ಹೋಗಿದ್ರೂ KSRTC ಬಸ್ 20 ಅಡಿ ಆಳದ ಗುಂಡಿಗೆ!

Public TV
1 Min Read

ಬೆಂಗಳೂರು: ಕೆಎಸ್‍ಆರ್‍ ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಆನೇಕಲ್ ನ ಗುಡ್ನಹಳ್ಳಿ ಕೆರೆ ಏರಿ ಮೇಲೆ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್ ಹಾಗೂ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದೆ. ಸದ್ಯಕ್ಕೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಆನೇಕಲ್ ಡಿಪೋಗೆ ಸೇರಿದ್ದ ಈ ಬಸ್, ಆನೇಕಲ್‍ನಿಂದ ಹೊಸೂರಿನ ಕಡೆ ತೆರಳುತ್ತಿತ್ತು, ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೆಎಸ್‍ಆರ್‍ಟಿಸಿ ಬಸ್ ಒಂದು ಅಡಿಯಷ್ಟು ಮುಂದೆ ಹೋಗಿದ್ದರೆ 20 ಅಡಿ ಆಳದ ಗುಂಡಿಗೆ ಬಿದ್ದು ಅಪಾಯ ಸಂಭವಿಸುತ್ತಿತ್ತು. ಆದರೆ ಅದೃಷ್ಟವಶಾತ್ ಬಸ್ ಚಕ್ರ ಕೆಸರಿನಲ್ಲಿ ಹೂತುಕೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಆನೇಕಲ್ ಪೊಲೀಸರು ಬಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *