ಈ ಬಾರಿ ಸರಳ ದಸರಾ: ಹೆಚ್‌.ಸಿ ಮಹದೇವಪ್ಪ

By
1 Min Read

ಮೈಸೂರು: ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು (Mysuru Dasara 2023) ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ (Rain) ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ (Farmers) ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

2021ರಲ್ಲಿ ಕೋವಿಡ್‌ ಕಾರಣದಿಂದಾಗಿ ಸರಳ ದಸರಾ ಆಚರಿಸಲಾಗಿತ್ತು. ಜಂಬೂ ಸವಾರಿ ಮೆರವಣಿಗೆ ನಡೆದರೂ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕಳೆದ ವರ್ಷ ಅದ್ಧೂರಿ ದಸರಾ ಆಚರಣೆ ಮಾಡಲಾಗಿತ್ತು, ಆದರೆ ಈ ಬಾರಿ ಮಳೆ ಕೊರತೆಯಿಂದಾಗಿ ಬರ ವ್ಯಾಪಿಸಿರುವುದರಿಂದ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್