ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ- ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ವಶಕ್ಕೆ

By
1 Min Read

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ (Nitin Gadkari) ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ (Belagavi) ಹಿಂಡಲಗಾ (Hindalga) ಜೈಲಿನ ಕೈದಿಯನ್ನು ಮಹಾರಾಷ್ಟ್ರ (Maharashtra) ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾ.21ರಂದು ಮಹಾರಾಷ್ಟ್ರದ ನಾಗ್ಪುರದ (Nagpura) ಸಚಿವರ ಕಚೇರಿಗೆ ಕರೆ ಮಾಡಿ ಕೈದಿಯ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿತ್ತು. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು

ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಹಲವು ಬಾರಿ ತನಿಖೆ ನಡೆಸಿದ್ದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

Share This Article