ತಲವಾರು ದಾಳಿಗೆ ಯತ್ನಿಸಿದ ಮೂವರ ಬಂಧನ

Public TV
1 Min Read

ಮಂಗಳೂರು: ಅನ್ಯಕೋಮಿನ ವ್ಯಕ್ತಿಯೋರ್ವನ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ (Mangaluru) ಕಾವೂರು ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕಳೆದ ಆಗಸ್ಟ್ 20ರಂದು ಸ್ಕೂಟರ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅನ್ಯ ಕೋಮಿನ ವ್ಯಕ್ತಿಯೋರ್ವರಿಗೆ ತಲವಾರು ಬೀಸಿದ್ದಾರೆ. ಈ ವೇಳೆ ಅವರು ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಕೇವಲ 24 ಗಂಟೆಯೊಳಗೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಪ್ರೇಮ ಕಥನ- ಪತಿ ಭೇಟಿಯಾಗಲು ಭಾರತಕ್ಕೆ ಬಂದ ಬಾಂಗ್ಲಾ ಮಹಿಳೆಗೆ ಶಾಕ್!

ಪಂಜಿಮೊಗರು ನಿವಾಸಿಗಳಾದ ಚರಣ್ ರಾಜ್, ಸುಮಂತ್ ಬರ್ಮನ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಚರಣ್ ರಾಜ್ ರೌಡಿ ಶೀಟರ್ ಆಗಿದ್ದು,ಜನರಲ್ಲಿ ಭಯ ಹುಟ್ಟಿಸಲು ಈ ಕೃತ್ಯ ನಡೆಸಿರೋದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್