ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರು

Public TV
0 Min Read

ನವದೆಹಲಿ: ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವೆ. ರೈಲ್ವೆ ಸಚಿವಾಲಯದಿಂದ ಸೇತುವೆಗಳನ್ನು ಮಂಜೂರು ಮಾಡಲಾಗಿದೆ.

ಹೊಳೆನರಸೀಪುರದ ಅಕ್ಕಿಹೆಬ್ಬಾಳು–ಮಂಡಗೆರೆ, ಮಂಡಗೆರೆ–ಹೊಳೆನರಸೀಪುರ ಮತ್ತು ಕಡೂರು ಜಂಕ್ಷನ್‌–ಬಿರೂರು ಜಂಕ್ಷನ್‌ ನಡುವೆ ಮೇಲ್ಸೇತುವೆ ನಿರ್ಮಾಣವಾಗಲಿವೆ.

ಈ ಯೋಜನೆಗಳನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

Share This Article