ಫಾಲ್ಸ್‌ನಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲು

Public TV
1 Min Read

ಕಾರವಾರ: ಪ್ರವಾಸಕ್ಕೆಂದು ತೆರಳಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬುರುಡೆ ಪಾಲ್ಸ್ ನಲ್ಲಿ ನಡೆದಿದೆ.

ಶಿರಸಿ ಮೂಲದ ಮುರಳಿ, ಸಿದ್ದಾಪುರದ ಅಭಿಷೇಕ್ ನಾಯ್ಕ, ಕೇರಳ ಮೂಲದ ಸಾಯಿ ಮೃತ ವೈದ್ಯಕೀಯ ವಿದ್ಯಾರ್ಥಿಗಳು. ಸಾವನ್ನಪ್ಪಿದ ವಿದ್ಯಾರ್ಥಿಗಳು ಸಿದ್ದಾಪುರ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕಾಲೇಜಿಗೆ ಇಂದು ರಜೆ ಇದ್ದಿದ್ದರಿಂದ ಮುರಳಿ, ಅಭಿಷೇಕ್ ಹಾಗೂ ಸಾಯಿ ಪ್ರವಾಸಕ್ಕೆ ಪ್ಲಾನ್ ಮಾಡಿಕೊಂಡಿದ್ದರು. ಹೀಗಾಗಿ ಕಾಲೇಜ್‍ನಿಂದ ಸುಮಾರು 35 ಕಿ.ಮೀ. ದೂರದ ಬುರುಡೆ ಪಾಲ್ಸ್ ಗೆ ಮಧ್ಯಾಹ್ನ ಬಂದಿದ್ದರು. ಬಳಿಕ ಈಜಲು ಹೋಗಿದ್ದಾಗ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಕೆಲವರು ವಿದ್ಯಾರ್ಥಿಗಳು ನೀರುಪಾಲಾದ ದೃಶ್ಯವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಸಿಗುತ್ತಿದ್ದಂತೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಗಳ ಶವಗಳನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *