ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

Public TV
2 Min Read

ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹುಲಿ ಅಂದಾಜು ಪ್ರಕ್ರಿಯೆಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕೋಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ.

ದೇಶದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲೂ ಆರಂಭವಾಗಿದೆ. ಇಂದಿನಿಂದ ಫೆಬ್ರವರಿ 8 ರವರಗೆ ಗಣತಿ ಪ್ರಕ್ರಿಯೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಾಂಸಹಾರಿ ಹಾಗೂ ಸಸ್ಯಹಾರಿ ಪ್ರಾಣಿಗಳ ಓಡಾಟಗಳ ಕುರಿತಾದ ಗುರುತುಗಳು, ಅವುಗಳ ಹಿಕ್ಕೆ, ಲದ್ದಿ, ಪಾದದ ಗುರುತು, ಪರಚಿದ ಗುರುತುಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ಬಂಡೀಪುರವನ್ನು ಮೂರು ಬ್ಲಾಕ್‍ಗಳನ್ನಾಗಿ ವಿಂಗಡಿಸಿ 112 ಗಸ್ತುಗಳಲ್ಲಿ ಗಣತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

ಕೊರೊನಾ ಸಂದರ್ಭದಲ್ಲಿ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೊರಗಿನಿಂದ ಬಂದವರಿಂದ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ಗಣತಿ ಕಾರ್ಯದಲ್ಲಿ ಸ್ವಯಂಸೇವಕರ ಸೇವೆ ಬಳಸಿಕೊಳ್ಳುತ್ತಿಲ್ಲ. ಗಣತಿ ಕಾರ್ಯದಲ್ಲಿ ಉಪವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಅರಣ್ಯ ವೀಕ್ಷಕರು ಸೇರಿದಂತೆ 300 ಹೆಚ್ಚು ಮಂದಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಹುಲಿಗಳ ಗಣತಿಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕಾಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ. ಎಂ ಸ್ಟ್ರೈಪ್ಸ್ ಆ್ಯಪ್‍ನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಭಾರತೀಯ ವನ್ಯಜೀವಿವ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಬಂಡೀಪುರದಲ್ಲಿ 40 ಮೊಬೈಲ್‍ಗಳಿಗೆ ಈ ತಂತ್ರಾಂಶ ಅಳವಡಿಸಲಾಗಿದೆ.

ಅಂದಾಜು ಪ್ರಕ್ರಿಯೆಗೆ ನಿಯೋಜಿಸಲಾಗಿರುವ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಾಗುವ ಮಾಹಿತಿಗಳನ್ನು ಈ ಆ್ಯಪ್‍ನಲ್ಲಿ ದಾಖಲಿಸಲಿದ್ದು, ಹೆಚ್ಚಿನ ನಿಖರತೆ ಇರಲಿದೆ. ಇದನ್ನೂ ಓದಿ: ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

ಈಗಾಗಲೇ ಕ್ಯಾಮೆರಾ ಟ್ರಾಪ್ ಮೂಲಕ ಹುಲಿ ಅಂದಾಜು ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಅಂತಿಮ ಹಂತದ ಅಂದಾಜು ಪ್ರಕ್ರಿಯೆ ಇದೀಗ ಆರಂಭಗೊಂಡಿದೆ. 2018ರಲ್ಲಿ ಕೈಗೊಂಡಿದ್ದ ನಾಲ್ಕನೇ ಅಖಿಲ ಭಾರತ ಮಟ್ಟದ ಗಣತಿ ಕಾರ್ಯ ಬಂಡಿಪುರ ಸಂರಕ್ಷಿತ ಪ್ರದೇಶದಲ್ಲಿ 173 ಹುಲಿಗಳನ್ನು ಗುರುತಿಸಲಾಗಿತ್ತು. ಈ ಬಾರಿ ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!

Share This Article
Leave a Comment

Leave a Reply

Your email address will not be published. Required fields are marked *