ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್

Public TV
1 Min Read

ಬೆಂಗಳೂರು: ಮೈಸೂರು-ಬೆಂಗಳೂರಿನ(Mysuru-bengaluru) ನಡುವೆ ಸಂಚರಿಸುತ್ತಿದ ಟಿಪ್ಪು ಎಕ್ಸ್‌ಪ್ರೆಸ್ (Tippu Express) ರೈಲಿನ (Train) ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ (Wadiyar Express) ಎಂದು ಮರುನಾಮಕರಣ ಮಾಡಲಾಗಿದೆ.

ಟಿಪ್ಪು ಎಕ್ಸ್‌ಪ್ರೆಸ್ ರೈಲಿನೊಂದಿಗೆ ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿಗೂ ಹೆಸರು ಬದಲಾವಣೆ ಮಾಡಿ, ಕುವೆಂಪು ಎಕ್ಸ್‌ಪ್ರೆಸ್ (Kuvempu Express) ಎಂದು ಹೆಸರು ಬದಲಾವಣೆ ಮಾಡಿರುವುದಾಗಿ ಶುಕ್ರವಾರ ರೈಲ್ವೇ ಇಲಾಖೆ ಆದೇಶ ನೀಡಿದೆ. ಇದನ್ನೂ ಓದಿ: ನಾಗ್ಪುರ- ಮುಂಬೈ ಎಕ್ಸ್‌ಪ್ರೆಸ್‌ವೇ ಶೀಘ್ರವೇ ಸಂಚಾರಕ್ಕೆ ಮುಕ್ತ – ವಾಹನಗಳಿಗೆ 120 kmph ವೇಗದ ಮಿತಿ ನಿಗದಿ

ಈ ಬಗ್ಗೆ ಮೈಸೂರು ಸಂಸದ ಪ್ರತಿಕ್ರಿಯಿಸಿ, ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್‌ಪ್ರೆಸ್ ಬದಲು ಒಡೆಯರ್ ಎಕ್ಸ್‌ಪ್ರೆಸ್ ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು ಕುವೆಂಪು ಎಕ್ಸ್‌ಪ್ರೆಸ್ ಆಗಲಿದೆ. ಇದಕ್ಕಾಗಿ ರೈಲ್ವೇ ಮಂತ್ರಿ ಅಶ್ವಿನಿ ವೈಷ್ಣವ್ ಹಾಗೂ ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆರ್‌ಬಿಐನಿಂದ ಶೀಘ್ರದಲ್ಲೇ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿ ಬಿಡುಗಡೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *