ನಟಿ ಸಮಂತಾ ಭಗವದ್ಗೀತೆ ಪಾಠ ಮಾಡಿದ್ದು ಯಾರಿಗೆ?

Public TV
2 Min Read

ಶಾಕುಂತಲಂ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸುತ್ತಿದ್ದಂತೆ ಸಮಂತಾ ಮೇಲೆ ಹಲವರು ಮುಗಿಬಿದ್ದಿದ್ದಾರೆ. ನೆಗೆಟಿವ್ ಕಾಮೆಂಟ್ ಗಳನ್ನು ಮಾಡುವ ಮೂಲಕ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸಮಂತಾ ನಟಿಸಿದರೆ ಆ ಸಿನಿಮಾಗಳು ಸೋಲುತ್ತವೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಈ ಎಲ್ಲದಕ್ಕೂ ಉತ್ತರ ಎನ್ನುವಂತೆ ಸಮಂತಾ ಭಗವದ್ಗೀತೆಯ (BhagavadGita) ಸಾಲುಗಳನ್ನು ಹಾಕಿದ್ದಾರೆ.

ಕಾರಿನಲ್ಲಿ ಕುಳಿತಿರುವ ಸುಂದರವಾದ ಫೋಟೋವೊಂದನ್ನು ಶೇರ್ ಮಾಡಿರುವ ಸಮಂತಾ, ‘ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ. ಮಾ ಕರ್ಮಫಲಹೇತುರ್ಭೂರ್ಮಾತೇ ಸಂಗೋಸ್ತ್ವ ಕರ್ಮಣಿ’ ಎಂದು ಬರೆಯುವ ಮೂಲಕ ಟೀಕೆ ಮಾಡುವವರಿಗೆ ಉತ್ತರ ನೀಡಿದ್ದಾರೆ. ಅದರಲ್ಲೂ ಈ ಪೋಸ್ಟ್ ಹಾಕಿದ್ದು, ತೆಲುಗಿನ ನಿರ್ಮಾಪಕ ಚಿಟ್ಟಿಬಾಬುಗೆ ಎಂದು ಹೇಳಲಾಗುತ್ತಿದೆ. ಶಾಕುಂತಲಂ ಸಿನಿಮಾ ನೋಡಿದ್ದ ಚಿಟ್ಟಿಬಾಬು, ‘ಸಮಂತಾ ಅಧ್ಯಾಯ ಮುಗೀತು’ ಎಂದು ಟೀಕಿಸಿದ್ದರು.  ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಸ್ಫೋಟಕ ಫಿಫ್ಟಿ – ಹೋರಾಡಿ ಕೊನೆಗೆ ಸೋತ ಆರ್‌ಸಿಬಿ

ಸಮಂತಾ (Samantha) ನಟನೆಯ ‘ಶಾಕುಂತಲಂ’ (Shakunthalam) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಕಮಾಲ್ ಮಾಡಲಿಲ್ಲ. ಐವತ್ತು ಕೋಟಿ ವೆಚ್ಚದಲ್ಲಿ ತಯಾರಾದ ಈ  ಸಿನಿಮಾ  ನಿರ್ಮಾಪಕರಿಗೆ ಹಣ ತಂದುಕೊಡಲಿಲ್ಲ. ಹಾಗಾಗಿ ಮತ್ತೆ ಸಮಂತಾ ವಿರುದ್ಧ ಟ್ರೋಲ್ ಹಾವಳಿ ಹೆಚ್ಚಾಗಿದೆ. ಸಮಂತಾ ವಿರುದ್ಧ ನೆಗೆಟಿವ್ ಕಾಮೆಂಟ್ ಕೂಡ ಬರೆಯುತ್ತಿದ್ದಾರೆ. ಇದೆಲ್ಲದನ್ನೂ ತಲೆ ಕೆಡಿಸಿಕೊಳ್ಳದೇ ಸಮಂತಾ ಮುಂದಿನ ಪ್ರಾಜೆಕ್ಟ್ ಬಗ್ಗೆ ಗಮನ ಕೊಟ್ಟಿದ್ದಾರೆ.

ಸಮಂತಾ ಕನಸಿನ ಪ್ರಾಜೆಕ್ಟ್ ಸಿಟಾಡೆಲ್ (Citadel) ವೆಬ್ ಸೀರಿಸ್ (Web Series) ಶೂಟಿಂಗ್ ಇನ್ನೇನು ಶುರುವಾಗಲಿದೆ. ಈ ವೆಬ್ ಸರಣಿಯ ಚಿತ್ರೀಕರಣಕ್ಕೆ ವಿದೇಶದಲ್ಲಿ ನಡೆಯಲಿದೆ. ಹಾಗಾಗಿ ಅವರು ವಿಮಾನ ಏರಿದ್ದಾರೆ. ತಾವು ವಿದೇಶ ಪ್ರಯಾಣವನ್ನು ಮಾಡುತ್ತಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿಟಾಡೆಲ್ ರಾಜ್ ಮತ್ತು ಡಿಕೆ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೆಬ್ ಸಿರೀಸ್. ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸರಣಿಯಲ್ಲಿ ಸಮಂತಾ ವಿಶೇಷ ಪಾತ್ರವನ್ನು ಮಾಡಲಿದ್ದಾರೆ. ಈ ಪಾತ್ರಕ್ಕಾಗಿ ಅವರು ತಯಾರಿಯನ್ನೂ ಮಾಡಿಕೊಂಡಿದ್ದಾರೆ. ಭಾರೀ ಬಜೆಟ್ ನಲ್ಲಿ ಈ ವೆಬ್ ಸಿರೀಸ್ ಮೂಡಿ ಬರಲಿದೆ. ಈ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದರು. ಅದರ ಮಾಹಿತಿಯನ್ನು ಸದ್ಯದಲ್ಲೇ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article