ಇಂದು ಸಿದ್ದಗಂಗಾ ಶ್ರೀಗಳ 4ನೇ ಪುಣ್ಮಸ್ಮರಣೆ- ಬೆಳಗ್ಗೆ 5 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭ

Public TV
1 Min Read

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಮಹಾಶಿವಯೋಗಿ ಸಿದ್ದಗಂಗಾ ಮಠ (Siddaganga Mutt) ದ ಲಿಂಗೈಕ್ಯ ಡಾ.ಶಿವಕುಮಾರ (Dr. Shivakumara Swamiji) ಶ್ರೀಗಳ 4ನೇ ಪುಣ್ಯ ಸ್ಮರಣೆಗೆ ತುಮಕೂರು ಮಠ ಸಿದ್ಧಗೊಂಡಿದೆ.

ಕೊರೊನಾ ಹಿನ್ನೆಲೆ ಕಳೆದೆರಡು ವರ್ಷದಿಂದ ಪುಣ್ಯಸ್ಮರಣೆಯನ್ನು ಸಾಧಾರಣವಾಗಿ ಆಚರಿಸಲಾಗಿತ್ತು. ಈ ವರ್ಷ ವಿಜೃಂಭಣೆಯಿಂದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಮಠದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗಿದೆ. ಇಂದು ಪೂಜ್ಯರ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಮುಂಜಾನೆ 5 ಗಂಟೆಯಿಂದ ಮಹಾರುದ್ರಾಭಿಷೇಕ ಮತ್ತು ರಾಜೋಪಚಾರ, ಬಿಲ್ವಾರ್ಚನೆ ಹಾಗೂ ಇತರೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

ಬೆಳಗ್ಗೆ 8ಕ್ಕೆ ಬೆಳ್ಳಿರಥದಲ್ಲಿ ಶಿವಕುಮಾರ ಶ್ರೀಗಳ ಪುತ್ಥಳಿಯನ್ನಿಟ್ಟು ಮೆರವಣಿಗೆ ಮಾಡಲಾಗುತ್ತದೆ. ಬೆಳಗ್ಗೆ 10ಕ್ಕೆ ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿಎಸ್‍ವೈ ಉದ್ಘಾಟಿಸಲಿದ್ದು, ಸಿಎಂ ಬೊಮ್ಮಾಯಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಠಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತಗಣ, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ.

ಗೋಸಲ ಸಿದ್ಧೇಶ್ವರ ವೇದಿಕೆಯಲ್ಲಿ ಬೃಹತ್ ಸಭಾಮಂಟಪವನ್ನು ನಿರ್ಮಿಸಲಾಗುತ್ತಿದ್ದು, ಕೈಗಾರಿಕಾ ವಸ್ತುಪ್ರದರ್ಶನದ ಆವರಣ, ಸಾದರ ಕೊಪ್ಪಲು, ಕೆಂಪಹೊನ್ನಯ್ಯ ಅತಿಥಿಗೃಹ, ಹೊಸ ಪ್ರಸಾದ ನಿಲಯ, ಹಳೆ ಪ್ರಸಾದ ನಿಲಯ ಹೀಗೆ ಐದು ಕಡೆ ಪ್ರಸಾದದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳಿಗೆ ಉಣ ಬಡಿಸಲು ವಿಶೇಷ ಖಾದ್ಯವನ್ನು ಕಳೆದ ಮೂರು ದಿನದಿಂದ ಅಡುಗೆ ಭಟ್ಟರು ತಯಾರಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *