ಕ್ಯಾನ್ಸರ್ ಸುದ್ದಿ ಹಬ್ಬಿದ್ದಕ್ಕೆ, ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಗಾಸ್ಟಾರ್ ಚಿರಂಜೀವಿ

Public TV
2 Min Read

ತೆಲುಗಿನ ನಟ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರನ್ನ ಪೂಜಿಸುವ, ಆರಾಧಿಸುವ ಅಪಾರ ಅಭಿಮಾನಿಗಳಿದ್ದಾರೆ. ಇತ್ತೀಚಿಗೆ ಚಿರಂಜೀವಿ ಅವರಿಗೆ ಕ್ಯಾನ್ಸರ್ ಸುದ್ದಿ ವೈರಲ್ ಆಗಿದ್ದರ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಹೇಗಿದೆ.? ಅಷ್ಟಕ್ಕೂ ಆಗಿದ್ದೇನು.? ಎಂಬ ಮಾಹಿತಿ ಇಲ್ಲಿದೆ. ಇದನ್ನೂ ಓದಿ:ಅಭಿಷೇಕ್ ಅಂಬರೀಶ್ ಮದುವೆ : ಭಾಗಿಯಾಗಲಿದೆ ತಾರಾ ದಂಡು

ನಟ ಚಿರಂಜೀವಿ ಕೊನಿಡೆಲಾ ಅವರು ಅನಾರೋಗ್ಯದ (Health) ಅಪ್‌ಡೇಟ್ ಕೇಳಿ, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ನಟ ತಮ್ಮ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ನಾನು ಕ್ಯಾನ್ಸರ್ ಸೆಂಟರ್ ಉದ್ಘಾಟನೆ ವೇಳೆ ಕ್ಯಾನ್ಸರ್ ಜಾಗೃತಿ ಬಗ್ಗೆ ಮಾತನಾಡಿದ್ದೆ. ಆಗಾಗ ವೈದ್ಯಕೀಯ ಪರೀಕ್ಷೆ ಮಾಡಿಸಿದರೆ ಕ್ಯಾನ್ಸರ್ ತಡೆಗಟ್ಟಬಹುದು ಅಂತ ಹೇಳಿದ್ದೆ. ನಾನೂ ಕೂಡ ಎಚ್ಚರಿಕೆ ವಹಿಸಿ, ಪರೀಕ್ಷೆ ಮಾಡಿಸಿದ್ದೆ. ನನ್ನಲ್ಲಿ ಕ್ಯಾನ್ಸರಸ್ ಅಲ್ಲದ ಊತ ಕಾಣಿಸಿತ್ತು. ಬಳಿಕ ಅದನ್ನು ತೆಗೆಯಲಾಯಿತು. ಆ ಪರೀಕ್ಷೆ ಮಾಡಿಸಿಕೊಳ್ಳದೇ ಇದ್ದಿದ್ದರೆ ಅದು ಕ್ಯಾನ್ಸರ್ ಆಗಿ ಬದಲಾಗುವ ಸಾಧ್ಯತೆ ಇತ್ತು. ಹಾಗಾಗಿಯೇ ಎಲ್ಲರೂ ಮುಂಜಾಗೃತೆ ವಹಿಸಿ, ಪರೀಕ್ಷೆ ಮಾಡಿಸಿಕೊಳ್ಳಬೇಕು ಅಂತ ಮಾತ್ರ ನಾನು ಹೇಳಿದ್ದೆ ಎಂದು ನಟ ಟ್ವೀಟ್ ಮಾಡಿದ್ದಾರೆ.

ಕೆಲವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ನನಗೆ ಕ್ಯಾನ್ಸರ್ ಆಗಿದೆ ಮತ್ತು ಚಿಕಿತ್ಸೆಯಿಂದ ಬದುಕಿದೆ ಅಂತ ಸುದ್ದಿ ಮಾಡಿದ್ದಾರೆ. ಇದರಿಂದ ಅನಗತ್ಯವಾಗಿ ಗೊಂದಲ ಶುರುವಾಗಿದೆ. ಅನೇಕ ಹಿತೈಷಿಗಳು ನನಗೆ ಸಂದೇಶ ಕಳಿಸಲು ಆರಂಭಿಸಿದ್ದಾರೆ. ಅವರಿಗೆಲ್ಲ ಇದು ನನ್ನ ಸ್ಪಷ್ಟನೆ. ವಿಷಯ ಅರ್ಥವಾಗದೇ ಅಸಂಬದ್ಧಗಳನ್ನೆಲ್ಲ ಬರೆಯಬೇಡಿ ಅಂತ ಮಾಧ್ಯಮದವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಇದರಿಂದಾಗಿ ಅನೇಕರಿಗೆ ಭಯ ಮತ್ತು ನೋವು ಆಗುತ್ತದೆ ಎಂದು ಚಿರಂಜೀವಿ ಅವರು ಸ್ಪಷ್ಟನೆ ನೀಡಿದ್ದಾರೆ.

ನೆಚ್ಚಿನ ನಟನಿಗೆ ಕ್ಯಾನ್ಸರ್ ಎಂಬ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದ ಅಭಿಮಾನಿಗಳಿಗೆ ಇದೀಗ ಚಿರಂಜೀವಿ ನೀಡಿರುವ ಸ್ಪಷ್ಟನೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಚಿರಂಜೀವಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಖುಷಿಪಟ್ಟಿದ್ದಾರೆ.

Share This Article