ಮೈಸೂರಿನಲ್ಲಿ ದಸರಾ ಸಂಭ್ರಮ – ನಾಳೆ ಕ್ಯಾಪ್ಟನ್ ಅರ್ಜುನ ಸಾರಥ್ಯದಲ್ಲಿ ಗಜಪಯಣ ಆರಂಭ

Public TV
1 Min Read

ಮೈಸೂರು: ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡ ಮೈಸೂರಿಗೆ ಬರಲಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ. ಗಜಪಡೆಯ ಕ್ಯಾಪ್ಟನ್ ಅರ್ಜುನ ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು ಸ್ಟ್ಯಾಂಡ್‌ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ರಾಧಿಕಾ ಪಂಡಿತ್ ಗೆ ಸಹಾಯ ಮಾಡಿದ ಪುತ್ರಿ ಐರಾ

ಹೀಗೆ ಬಂದ ಆನೆಗಳನ್ನು ಎರಡು ದಿನ ಅರಣ್ಯ ಇಲಾಖೆಯ ಆವರಣದಲ್ಲಿ ವಿಶ್ರಾಂತಿಗೆ ಬಿಡಲಾಗುತ್ತದೆ. ಆಗಸ್ಟ್ 10 ರಂದು ಮೈಸೂರು ಅರಮನೆಗೆ ಈ ಆನೆಗಳನ್ನು ಸ್ವಾಗತಿಸಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *