ಬುರ್ಹಾನ್ ವಾನಿ ಬ್ರಿಗೇಡ್‍ನಲ್ಲಿದ್ದ ಕೊನೆಯ ಉಗ್ರನ ಹತ್ಯೆ

Public TV
1 Min Read

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಇಬ್ಬರು ಪ್ರಮುಖ ಉಗ್ರರನ್ನು ಭಾರತೀಯ ಸೇನೆ ಶುಕ್ರವಾರ ಬೆಳಗ್ಗೆ ಶೋಪಿಯನ್ ಜಿಲ್ಲೆಯಲ್ಲಿ ಹೊಡೆದುರುಳಿಸಿದೆ. ಸಾವನ್ನಪ್ಪಿದ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಸಹಚರರು ಎಂದು ಗುರುತಿಸಲಾಗಿದೆ.

ಸಾವನ್ನಪ್ಪಿದ ಉಗ್ರರನ್ನು ತಾರಿಕ್ ಮಾಲ್ವಿ ಮತ್ತು ಲತೀಫ್ ಟೈಗರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಉಗ್ರ ಬುರ್ಹಾನ್ ವಾನಿಯನ್ನು ಸೇನೆ ಹತ್ಯೆ ಮಾಡಿತ್ತು. ಹತ್ಯೆಯಾದ ಬಳಿಕ ಬುರ್ಹಾನ್ ವಾನಿ ತನ್ನ ಸ್ನೇಹಿತರ ಜೊತೆಗಿದ್ದ ಫೋಟೋ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಈ ಗುಂಪಿಗೆ ಬುರ್ಹಾನ್ ಬ್ರಿಗೇಡ್ ಎಂದು ಹೆಸರನ್ನು ಇಟ್ಟುಕೊಂಡಿದ್ದ. ಈ ಫೋಟೋದಲ್ಲಿ 11 ಮಂದಿಯನ್ನು ಸೇನೆ ಹತ್ಯೆ ಮಾಡಿದ್ದು ಈಗ ಕೊನೆಯವನಾಗಿ ಲತೀಫ್ ಹತ್ಯೆಯಾಗಿದ್ದಾನೆ. ಈ ಮೂಲಕ ಬುರ್ಹಾನ್ ವಾನಿಯ ಬ್ರಿಗೇಡ್ ಕಾಶ್ಮೀರದಲ್ಲಿ ನಿರ್ಮೂಲನೆಯಾಗಿದೆ.

 

ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆಯ 34 ಆರ್‍ಆರ್ ಮತ್ತು ವಿಶೇಷ ಕಾರ್ಯಾಚರಣೆ ಗುಂಪು (ಎಸ್‍ಒಜಿ) ಜಂಟಿ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಮತ್ತು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಶೋಪಿಯಾನ್ ಜಿಲ್ಲೆಯು ಲೋಕಸಭಾ ಚುನಾವಣೆಯಲ್ಲಿ ಅನಂತನಾಗ್ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರದಲ್ಲಿ ಮೇ 6ಕ್ಕೆ ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *