ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
0 Min Read

ಬಳ್ಳಾರಿ: ಸರಣಿ ರಜೆ ಹಿನ್ನೆಲೆ ದಕ್ಷಿಣ ಕಾಶಿ, ವಿಶ್ವವಿಖ್ಯಾತ ಹಂಪಿಗೆ (Hampi) ಪ್ರವಾಸಿಗರ (Tourist) ದಂಡು ಹರಿದು ಬಂದಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಿಶ್ವಪ್ರಸಿದ್ಧ ಹಂಪಿ ಕಳೆದೆರಡು ದಿನಗಳಿಂದ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ವಿಜಯ-ವಿಠ್ಠಲ ದೇಗುಲ, ಕಲ್ಲಿನ ತೇರು ಹಾಗೂ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಸಹಸ್ರಾರು ಪ್ರವಾಸಿಗರು ಸೇರಿದ ಕಾರಣ ಹೆಚ್ಚಿನ ಜನದಟ್ಟಣೆಯಿಂದ ಹಲವೆಡೆ ಟ್ರಾಫಿಕ್ (Traffic) ಕಿರಿಕಿರಿ ಉಂಟಾಗಿತ್ತು.ಇದನ್ನೂ ಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

ಹಂಪಿಯ ಸ್ಮಾರಕಗಳ ಬಳಿ ಜನಸಾಗರವೇ ಹರಿದು ಬಂದಿದರೂ ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪ್ರವಾಸಿಗರು ಪರದಾಡಿದರು. ಇತ್ತ ಸರಣಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಜನಸಂದಣೆ ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು.

Share This Article