ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಬಿದ್ದ ಟ್ರ್ಯಾಕ್ಟರ್

Public TV
1 Min Read

– ಸ್ಥಳೀಯರಿಂದ ಚಾಲಕನ ರಕ್ಷಣೆ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಟ್ರ್ಯಾಕ್ಟರ್ ಬಿದ್ದಿದ್ದು, ಸ್ಥಳೀಯ ರೈತರು ಟ್ರ್ಯಾಕ್ಟರ್ ಚಾಲಕನನ್ನು ರಕ್ಷಿಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮದಲ್ಲಿ ನಡೆದಿದೆ.

ದೇವಿಗೆರೆ ಗ್ರಾಮದ ಮಂಜುನಾಥ್ ಟ್ರ್ಯಾಕ್ಟರ್‍ನಲ್ಲಿ ಮಣ್ಣು ತುಂಬಿಕೊಂಡು ನಾಲೆ ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ನೀರಿಗೆ ಬಿದ್ದಿದೆ. ಇದನ್ನು ಗಮನಿಸಿದ ದಿಂಡಗೂರು ಗ್ರಾಮದ ರೈತರಾದ ದಯಾನಂದ ಮತ್ತು ಹರೀಶ್ ಅವರು, ತಕ್ಷಣ ನೀರಿಗೆ ಹಾರಿ ಚಾಲಕನ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

ತಕ್ಷಣ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ರಕ್ಷಣಾ ಕಾರ್ಯ ನಡೆಸಿದ್ದಾರೆ. ಕ್ರೇನ್ ಮೂಲಕ ಟ್ರ್ಯಾಕ್ಟರ್ ಮೇಲೆತ್ತಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Share This Article
Leave a Comment

Leave a Reply

Your email address will not be published. Required fields are marked *