ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ರೈಲು ಚಾಲಕ!

Public TV
1 Min Read

ದಾವಣಗೆರೆ: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ ರೈಲು ಚಾಲಕನೇ ರಕ್ಷಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ ಪಟ್ಟಣದ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಬೆಂಗಳೂರು- ಧಾರವಾಡ ಸಿದ್ದಗಂಗಾ ಎಕ್ಸ್ ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ತಲೆ ಕೊಟ್ಟು ಆತ್ಮಹತ್ಯೆಗೆ ಮುಂದಾಗಿದ್ದ. ಅನಾಮಿಕ ವ್ಯಕ್ತಿ ರೈಲ್ವೆ ಹಳಿ ಮೇಲೆ ಮಲಗಿದ್ದನ್ನು ಕಂಡು ಚಾಲಕ ರೈಲು ನಿಲ್ಲಿಸಿದ್ದಾರೆ.

ರೈಲು ನಿಲ್ಲುವುದರೋಳಗೆ ರೈಲಿನ ಎಂಜಿನ್ ವ್ಯಕ್ತಿಯ ಮೇಲೆ ಹರಿದಿದ್ದರಿಂದ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ರೈಲು ಎಂಜಿನಿನ ಮಧ್ಯಭಾಗ ಸಿಲುಕಿದ್ದ ವ್ಯಕ್ತಿಯನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದು. ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *