ರೈಲ್ವೆ ಉದ್ಯೋಗಕ್ಕಾಗಿ ಪ್ರತಿಭಟನೆ – ರೈಲಿನ ಭೋಗಿಗೆ ಬೆಂಕಿ ಹಚ್ಚಿ ಆಕ್ರೋಶ

Public TV
1 Min Read

ನವದೆಹಲಿ: ದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ರೈಲಿನ ಭೋಗಿಗೆ ಬೆಂಕಿ ಹಚ್ಚಿ ರೈಲನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ರೈಲ್ವೆ ನಿಲ್ದಾಣದ ಫ್ಲಾಟ್‍ಫಾರ್ಮ್‍ನಾದ್ಯಂತ ಆಕ್ರೋಶಗೊಂಡ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿಗಳನ್ನು ಒಡೆದು ಹಾಕಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ರೈಲ್ವೇ ನೇಮಕಾತಿ ಪರೀಕ್ಷೆ ಆಯ್ಕೆ ಪ್ರಕ್ರಿಯೆಯನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ

ಹಿಂಸಾಚಾರದ ಘಟನೆಯ ಬಳಿಕ, ಭಾರತೀಯ ರೈಲ್ವೇಯು ಎನ್‍ಟಿಪಿಸಿ ಮತ್ತು ಹಂತ 1 ಪರೀಕ್ಷೆಗಳನ್ನು ಸ್ಥಗಿತಗೊಳಿಸಿದೆ. ಬಿಹಾರದಲ್ಲಿ ಸೋಮವಾರ ರೈಲ್ವೆ ನೇಮಕಾತಿ ಮಂಡಳಿಯು (RRB) ನಡೆಸಿದ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ (NTPC) ಸ್ಪರ್ಧಾತ್ಮಕ ಪರೀಕ್ಷೆ, 2021ರಲ್ಲಿ ಫಲಿತಾಂಶಗಳು ತಪ್ಪಾಗಿ ಬಂದಿವೆ ಎಂದು ಆರೋಪಿಸಿ ಸೋಮವಾರ ಬಿಹಾರದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.

ಇದೀಗ ಉಭಯ ಪಕ್ಷಗಳ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ. ಮಂಗಳವಾರ ರೈಲ್ವೇ ತನ್ನ ಉದ್ಯೋಗಾಕಾಂಕ್ಷಿಗಳಿಗೆ ಜನರಲ್ ನೋಟಿಸ್ ನೀಡಿದ್ದು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ರೈಲ್ವೆಯಲ್ಲಿ ನೇಮಕಾತಿ ನೀಡುವುದನ್ನು ನಿರ್ಬಂಧಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನೂ ಓದಿ: ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ ಒಂದು ದಿನದ ನಂತರ ಈ ರೀತಿ ಆದೇಶ ಹೊರಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *