ಮಂಗಳಮುಖಿಯರ ಪಾರ್ಟಿಯಲ್ಲಿ ಗಲಾಟೆ- ವ್ಯಕ್ತಿ ಕೊಲೆ

Public TV
1 Min Read

ರಾಮನಗರ: ಮಂಗಳಮುಖಿಯರ ಪಾರ್ಟಿಯಲ್ಲಿ ಗಲಾಟೆಯಾಗಿದ್ದು, ವ್ಯಕ್ತಿಯೊಬ್ಬ ಕೊಲೆಯಾಗಿರುವ ಘಟನೆ ಚನ್ನಪಟ್ಟಣ ನಗರದ ಲಾಳಘಟ್ಟ ಬಳಿ ನಡೆದಿದೆ.

ಮಂಗಳಮುಖಿಯರ ತಂಡವೊಂದು ಮನೆಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಅತಿಕ್ರಮಣವಾಗಿ ನಾಲ್ಕೈದು ಜನರ ಪ್ರವೇಶವಾಗಿದೆ. ಮನೆಗೆ ಪ್ರವೇಶ ಮಾಡಿ ಮಂಗಳಮುಖಿಯರ ಜತೆ ಗಲಾಟೆ ಮಾಡಿಕೊಂಡಿದ್ದು, ಮಂಗಳಮುಖಿಯರ ಕಡೆಯವರಿಂದ ಮಚ್ಚಿನಿಂದ ಹಲ್ಲೆ ನಡೆದಿದೆ. ಇದನ್ನೂ ಓದಿ: ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

ಹಲ್ಲೆಗೊಳಗಾದ ವ್ಯಕ್ತಿಯನ್ನು ಉದ್ದಾಡಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯಗಳಾಗಿವೆ.

ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:  ಏನಮ್ಮಾ ಯಾರಾದ್ರೂ ಫೋನ್ ಮಾಡಿದ್ರೆ ರಿಸೀವ್ ಮಾಡಲ್ವಾ..?- ಪಿಎಸ್‍ಐಗೆ ಸಿದ್ದರಾಮಯ್ಯ ತರಾಟೆ

 

Share This Article
Leave a Comment

Leave a Reply

Your email address will not be published. Required fields are marked *