ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಮೇಲೆ ಮರಬಿದ್ದು ಓರ್ವ ಸಾವು, ಮೂವರ ಸ್ಥಿತಿ ಗಂಭೀರ

Public TV
1 Min Read

ಮಡಿಕೇರಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಮರ ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಗ್ರಾಮದ ಪಂಚವಳ್ಳಿ ನಿವಾಸಿ ರಾಜು (36) ಮೃತ ಕಾರ್ಮಿಕ. ಚಾಲಕ ಸ್ವಾಮಿ ಹಾಗೂ ಜೊತೆಯಲ್ಲಿದ್ದ ಸುನೀಲ್ (28) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರ್ಮಿಕರು ಪಾಲಿಬೆಟ್ಟ ಹೊಸಳ್ಳಿ ಪ್ರದೇಶದ ತೋಟದ ಕೆಲಸ ಮುಗಿಸಿ, ಪಿರಿಯಾಪಟ್ಟಣ ಸಮೀಪದ ಅನುಗೋಡುವಿನ ತಮ್ಮ ಊರಿಗೆ ಟಾಟ ಏಸ್ ವಾಹನದಲ್ಲಿ ತೆರಳುತ್ತಿದ್ದರು. ವಾಹನದಲ್ಲಿ ಸುಮಾರು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ಬರುತ್ತಿದ್ದ ಟಾಟಾ ಏಸ್ ಮೇಲೆ ಮರ ಬಿದ್ದಿದ್ದು, ಚಾಲಕನ ಸಮೀಪವೇ ಕುಳಿತ್ತಿದ್ದ ರಜು ತಲೆಯ ಭಾಗಕ್ಕೆ ಮರ ಬಿದ್ದ ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಭಾಗದಲ್ಲಿ ಕುಳಿತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರು ದುಬಾರೆ ಎಸ್ಟೇಟ್‍ನ ಕಾರ್ಮಿಕರಾಗಿದ್ದು, ಅನುಗೋಡು ನಿವಾಸಿಗಳಾಗಿದ್ದಾರೆ.

ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸ್ವಾಮಿ, ಸುನೀಲ್ ಹಾಗೂ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಸಣ್ಣ ಪುಟ್ಟ ಗಾಯವಾಗಿರುವ ಕಾರ್ಮಿಕರನ್ನು ಸಿದ್ದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣೆ ಎಸ್‍ಐ ಸುಬ್ರಹ್ಮಣಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *