ಚಿಕ್ಕಮಗಳೂರು | ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ವೀರ ಯೋಧನಿಗೆ ಸನ್ಮಾನ

Public TV
1 Min Read

ಚಿಕ್ಕಮಗಳೂರು: ಪಾಕ್ ವಿರುದ್ಧ ಭಾರತ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರದಲ್ಲಿ (Operation Sindoor) ಗಾಯಗೊಂಡು, ರಜೆಯ ಮೇಲೆ ಹುಟ್ಟೂರು ಕಳಸದ ಹಳ್ಳುವಳ್ಳಿಗೆ ಆಗಮಿಸಿದ ವೀರ ಯೋಧನನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಕಳಸ (Kalasa) ತಾಲೂಕಿನ ಹಳ್ಳುವಳ್ಳಿಯ ಯೋಧ ರಾಜಪ್ಪ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ, ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಜೂ.11) ವೈದ್ಯಕೀಯ ರಜೆಯ ಮೇರೆಗೆ ಹುಟ್ಟೂರಿಗೆ ಆಗಮಿಸಿದ್ದಾರೆ. ಅವರು ಊರಿಗೆ ಬಂದಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅವರಿಗೆ ಅದ್ದೂರಿ ಸ್ವಾಗತಿಸಿ, ಸನ್ಮಾನ ಮಾಡಿದ್ದಾರೆ. ಇದನ್ನೂ ಓದಿ: ಎಸಿ ಬಳಕೆಗೆ ಹೊಸ ನಿಯಮ – ದೇಶಕ್ಕೆ 18,000 ಕೋಟಿ ಉಳಿತಾಯ

ಸ್ಥಳೀಯರು ಕಳಸ ಪಟ್ಟಣದಲ್ಲಿ ಯೋಧನನ್ನ ಮೆರವಣಿಗೆಯಲ್ಲಿ ಕರೆದೊಯ್ದಿದ್ದಾರೆ. ರಾಜಪ್ಪ ಅವರು ಬಿಎಸ್‍ಎಫ್‍ನಲ್ಲಿ (BSF) ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿ

Share This Article