ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

Public TV
1 Min Read

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯ (Kalaburagi) ಹೊರವಲಯದ ಪಟ್ನಾ ಗ್ರಾಮದಲ್ಲಿ ನಡೆದಿದೆ.

ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Tumakuru | ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು

Share This Article