ಲಾರಿ, ಎತ್ತಿನಬಂಡಿ ಮುಖಾಮುಖಿ ಡಿಕ್ಕಿ – ಚಾಲಕ ಮತ್ತು 3 ಎತ್ತುಗಳು ಸಾವು

Public TV
1 Min Read

ಹಾವೇರಿ: ಲಾರಿ ಮತ್ತು ಎತ್ತಿನಬಂಡಿ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕ ಮತ್ತು 3 ಎತ್ತುಗಳು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಬಳಿ ನಡೆದಿದೆ.

ಮೂರ್ತಿ ಲಮಾಣಿ (33) ಮೃತ ದುರ್ದೈವಿ. ಮೃತ ವ್ಯಕ್ತಿಯು ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಧೂಪದಹಳ್ಳಿ ತಾಂಡಾದ ನಿವಾಸಿಯಾಗಿದ್ದಾರೆ. ಸಂಗೂರು ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

ಎತ್ತಿನಬಂಡಿಯಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

Share This Article
Leave a Comment

Leave a Reply

Your email address will not be published. Required fields are marked *