ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರು ಆಸ್ಪತ್ರೆಗೆ ದಾಖಲು

Public TV
1 Min Read

ಹಾವೇರಿ: ಕಾರಿಗೆ ಲಾರಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಾಗೋಡ ಕ್ರಾಸ್ ಬಳಿ ನಡೆದಿದೆ.

(27)ಬಸವರಾಜ ತೆಗ್ಗಿನಮನಿ ಮತ್ತು (21)ಶಂಕ್ರಪ್ಪ ಮೃತರಾಗಿದ್ದಾರೆ. ಮೃತರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಸೋಮನಾಥ ಮತ್ತು ಸಂಜೀವ ಗಾಯಾಳುವಾಗಿದ್ದಾರೆ. ಇದನ್ನೂ ಓದಿ: ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ

ಗಾಯಾಳುಗಳುವನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಲಾರಿ ಕಾರಿಗೆ ಗುದ್ದಿದ್ದರಿಂದ ಈ ದುರ್ಘಟನೆ ನಡೆದಿದೆ. ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *