ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ – ಡೆತ್‍ನೋಟ್‍ನಲ್ಲಿ ಲಾಡ್ಜ್ ಮಾಲೀಕರ ಕ್ಷಮೆಯಾಚನೆ

By
1 Min Read

ತುಮಕೂರು: ನಗರದ (Tumakuru) ಲಾಡ್ಜ್ ಒಂದರಲ್ಲಿ ದಾವಣಗೆರೆ (Davanagere) ಪಿಎಸ್‍ಐ (PSI) ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ. ಅವರು ಬರೆದಿಟ್ಟಿದ್ದ ಡೆತ್‍ನೋಟ್ ಲಾಡ್ಜ್‌ನ ರೂಮ್‌ನಲ್ಲಿ ಪತ್ತೆಯಾಗಿದೆ.

- Advertisement -

2 ಪುಟ ಇರುವ ಡೆತ್‌ನೋಟ್‌ನಲ್ಲಿ, `ನನ್ನ ಸಾವಿಗೆ ನಾನೇ ಕಾರಣ’. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ತುಮಕೂರು | ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ನೇಣಿಗೆ ಶರಣು

- Advertisement -

ಜು.1ರಂದು ಬೆಳಿಗ್ಗೆ 7 ಗಂಟೆಗೆ ನಗರದದಲ್ಲಿರುವ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಕರೆ ಸ್ವೀಕರಿಸಿರಲಿಲ್ಲ. ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು.

- Advertisement -

- Advertisement -

ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ 4 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಮೊಹರಂ ಆಚರಣೆ ವೇಳೆ ದುರಂತ – ಬೆಂಕಿಗೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

Share This Article