ವಿಧವೆಯನ್ನು ಚುಡಾಯಿಸಿದ್ದಕ್ಕೆ ಯುವಕನಿಗೆ ಬಿತ್ತು ಗೂಸಾ

Public TV
1 Min Read

ತುಮಕೂರು: ವಿಧವೆಯನ್ನು ಚುಡಾಯಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದಲ್ಲಿ ಮೊಬೈಲ್ ಶಾಪ್ ನಡೆಸುತಿದ್ದ ನರೇಶ್ ಎಂಬವನೇ ಗೂಸಾ ತಿಂದ ವ್ಯಕ್ತಿ. ನರೇಶ್ ಇಲ್ಲಿನ ಎಸ್‍ಎಫ್‍ಕೆ ಸಮುದಾಯ ಭವನದಲ್ಲಿ ಕೆಲಸ ಮಾಡಿಕೊಂಡಿದ್ದ ವಿಧವೆಗೆ ಚುಡಾಯಿಸುತಿದ್ದ. ಅಲ್ಲದೇ ಪದೇ ಪದೇ ಸಮುದಾಯ ಭವನಕ್ಕೆ ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈತನ ಕಿರುಕುಳದಿಂದ ಬೆಸತ್ತ ಮಹಿಳೆ ತಮ್ಮ ಸಂಬಂಧಿಕರಿಗೆ ಈ ಬಗ್ಗೆ ತಿಳಿಸಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ನರೇಶ್‍ನ ಮೊಬೈಲ್ ಶಾಪ್ ಬಳಿ ಬಂದ ಮಹಿಳೆಯ ಸಂಬಂಧಿಕರು ಆತನನ್ನು ಹೊರಕ್ಕೆ ಎಳೆದುಕೊಂಡು ಬಂದು ಸಖತ್ ಗೂಸಾ ನೀಡಿದ್ದಾರೆ. ಇವರ ಜೊತೆಗೆ ಸಾರ್ವಜನಿಕರೂ ಸೇರಿಕೊಂಡು ಧರ್ಮದೇಟು ನೀಡಿ ನರೇಶ್‍ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *