ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸ್‍ಪಿ ಖಡಕ್ ತೀರ್ಮಾನ – 12 ದಿನದಲ್ಲಿ ಇಬ್ಬರು ಪಿಎಸ್‍ಐ ಅಮಾನತು

Public TV
1 Min Read

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಖಡಕ್ ತೀರ್ಮಾನ ತೆಗೆದುಕೊಂಡು ಭ್ರಷ್ಟ ಅಧಿಕಾರಿಗಳಿಗೆ ಚಾಟಿ ಬೀಸುತ್ತಿದ್ದಾರೆ.

ಫೆಬ್ರವರಿ 1ರಂದು ತುಮಕೂರಿನ ಜಯನಗರ ಪೊಲೀಸ್ ಠಾಣೆಯ ಪಿಎಸ್‍ಐ ಮುತ್ತುರಾಜು ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದರ ಬೆನ್ನಲ್ಲೇ ಈಗ ಇನ್ನೊಬ್ಬ ಪಿಎಸ್‍ಐಯನ್ನು ಕರ್ತವ್ಯ ಲೋಪದ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ.

ಪಿಎಸ್‍ಐ ರಾಘವೇಂದ್ರ

ಪಾವಗಡ ಪಟ್ಟಣ ಠಾಣೆಯ ಪಿಎಸ್‍ಐ ರಾಘವೇಂದ್ರ ಅವರನ್ನು ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಲಾಗಿದೆ.

ಸುಮಾರು ನಾಲ್ಕು ಪ್ರಕರಣಗಳಲ್ಲಿ ದೂರು ದಾಖಲಿಸಿಕೊಳ್ಳದೆ ಅರ್ಜಿದಾರರಿಗೆ ಮೋಸ ಮಾಡುವ ಹುನ್ನಾರ ನಡೆಸಿದ್ದು ಸಾಬೀತಾಗಿದೆ. ಹೀಗಾಗಿ ಯಾವುದೇ ಮುಲಾಜಿಲ್ಲದೆ ಪಿಎಸ್‍ಐ ರಾಘವೇಂದ್ರ ಅವರನ್ನು ಅಮಾನತುಗೊಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *