ಪ್ರಧಾನಿಯವರೇ ನಾವು ನಿಮ್ಮ ಜೊತೆಗಿದ್ದೇವೆ ಪಾಕಿಸ್ತಾವನ್ನು ಮುಗಿಸಿಬಿಡಿ: ವಿ.ಎಸ್ ಉಗ್ರಪ್ಪ

Public TV
1 Min Read

_ ಬಿಎಸ್‍ವೈ, ಸಿಟಿ ರವಿಗೆ ನಾಚಿಕೆ ಆಗಬೇಕು

ತುಮಕೂರು: ಪಾಕಿಸ್ತಾನ ನಮ್ಮ ಶತ್ರುರಾಷ್ಟ್ರ ಅನ್ನೋದರಲ್ಲಿ ಯಾವುದೇ ಪ್ರಶ್ನೆಯಿಲ್ಲ. ಪ್ರಧಾನಿ ಮೋದಿಯವರು ನಮ್ಮೆಲ್ಲರ ಬೆಂಬಲ ಪಡೆದು ಪಾಕಿಸ್ತಾನವನ್ನು ಮುಗಿಸಿ ಬಿಡಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರಧಾನಿಯವರಿಗೆ ಬೆಂಬಲ ಸೂಚಿಸಿದ್ದಾರೆ.

ಮೊದಲು ದೇಶ ಎಂಬ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಆದರೆ ಬಿಜೆಪಿಯ ದ್ವಂದ್ವ ನಿಲುವಿನಿಂದ ದೇಶದ ರಕ್ಷಣೆ ವಿಚಾರ ಕಗ್ಗಂಟಾಗಿ ಉಳಿದಿದೆ. 1971 ರಲ್ಲಿ ಇಂದಿರಾ ಗಾಂಧಿ ಪಾಕಿಸ್ತಾನವನ್ನು ಚಿತ್ರಾನ್ನ ಮಾಡಿದ್ದರು. ವಾಜಪೇಯಿ, ಎಲ್.ಕೆ ಅಡ್ವಾಣಿಯವರ ಸಹಕಾರ ಪಡೆದು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿ ದಿಟ್ಟತನ ತೋರಿದ್ದರು. ಪ್ರಧಾನಿ ಮೋದಿಯವರೂ ಈಗ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವುದರಲ್ಲಿ ನಮ್ಮ ಅಭ್ಯಂತರ ಇಲ್ಲ. ನಾವೂ ಅವರಿಗೆ ಬೆಂಬಲ ನೀಡುತ್ತೇವೆ ಎಂದರು.

ರಾಜ್ಯದ ಪ್ರವಾಸಿ ತಾಣಗಳಲ್ಲಿ ಜೂಜು ಕೇಂದ್ರವನ್ನು ಸ್ಥಾಪಿಸಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರಪ್ಪ ಖಂಡಿಸಿದ್ದಾರೆ. ಇದು ಬಿಜೆಪಿಯ ರಾಷ್ಟ್ರ ಪ್ರೇಮ ಹಾಗೂ ಸಂಸ್ಕೃತಿಯನ್ನು ತೋರಿಸುತ್ತದೆ. ಈ ರೀತಿಯ ಜೂಜು ಕೇಂದ್ರವನ್ನು ತೆರೆಯಲು ಹೊರಟಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಸಿ.ಟಿ ರವಿಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *