– ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ನಂಟು
ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ (Suhas Shetty Murder Case) ಹೊಸ ತಿರುವು ಪಡೆದುಕೊಂಡಿದೆ. ಎನ್ಐಎ ತನಿಖೆ ಆರಂಭಿಸುತ್ತಿದ್ದಂತೆ ಹತ್ಯೆಯಲ್ಲಿ ಪಿಎಫ್ಐ ನಂಟು ಇರೋದು ಬೆಳಕಿಗೆ ಬಂದಿದೆ. ಜೊತೆಗೆ ಹತ್ಯೆಗೆ ವಿದೇಶದಿಂದ ಫಂಡಿಗ್ (Foreign Funding) ಆಗಿದೆ ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹತ್ಯೆ ನಡೆಸಿದ ಹಾಗೂ ಸಹಕರಿಸಿದ 12 ಮಂದಿಯನ್ನ ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್ಐಎಗೆ (NIA) ವಹಿಸಿದ್ದು ಎಲ್ಲಾ ಆರೋಪಿಗಳನ್ನ ವಶಕ್ಕೆ ಪಡೆದಿದೆ. ಈ ಹತ್ಯೆ ಆದ ದಿನದಿಂದ ಹಿಂದೂ ಮುಖಂಡರು, ಬಿಜೆಪಿ ಮುಖಂಡರು ಈ ಪ್ರಕರಣವನ್ನು ಎನ್ಐಎಗೆ ನೀಡಲು ಒತ್ತಾಯಿಸುತ್ತಲೇ ಇದ್ದರು. ಈ ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ (PFI) ಸಂಘಟನೆ ನೇರವಾಗಿ ಭಾಗಿಯಾಗಿದೆ, ಜೊತೆಗೆ ಹತ್ಯೆಗೆ ವಿದೇಶದಿಂದಲೂ ಹಣದ ಹೊಳೆ ಹರಿದುಬಂದಿದೆ ಎಂದು ಆರೋಪಿಸಿದ್ದರು. ಇದೀಗ ಎನ್ಐಎ ತನಿಖೆಯ ವೇಳೆಯೂ ಈ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ
ಈ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಪೊಲೀಸರ ಮೂಲಕವೇ ತನಿಖೆ ನಡೆಸಲು ಆರಂಭಿಸಿದ್ದು ಎನ್ಐಎಗೆ ಕೊಡೋ ಅಗತ್ಯವಿಲ್ಲ ಎಂದಿತ್ತು. ಸುಹಾಸ್ ಶೆಟ್ಟಿ ಹೆತ್ತವರೂ ಎನ್ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ರಾಯಿಸಿದ್ರು. ಈ ನಡುವೆ ಸುಹಾಸ್ ಶೆಟ್ಟಿ ಹೆತ್ತವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್ಐಎಗೆ ನೀಡಲು ಒತ್ತಾಯಿಸಿದ್ದು, ಜಿಲ್ಲೆಯ ಸಂಸದ, ಶಾಸಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ತಂದಿದ್ದರು. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್ಗಳಿಗೆ ಬೆಂಕಿ
ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ ಐಎಗೆ ವಹಿಸಿತ್ತು. ಇದೀಗ ಆರೋಪಿಗಳನ್ನ ವಶಕ್ಕೆ ಪಡೆದ ಎನ್ಐಎ ಎಲ್ಲಾ 12 ಆರೋಪಿಗಳ ವಿಚಾರಣೆ ನಡೆಸಿದ್ದು, ಹೆಚ್ಚಿನ ಆರೋಪಿಗಳಿಗೆ ನಿಷೇಧಿತ ಪಿಎಫ್ಐ ಸಂಘಟನೆಯ ಜೊತೆ ನಂಟು ಇರೋದು ಬೆಳಕಿಗೆ ಬಂದಿದೆ. ಮಾತ್ರವಲ್ಲ ಎಲ್ಲ ಆರೋಪಿಗಳ ಬ್ಯಾಂಕ್ ಖಾತೆಯ ವಿವರ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳಿಗೆ ವಿದೇಶದಿಂದ ಫಂಡಿಗ್ ಆಗಿರೋ ಆಘಾತಕಾರಿ ವಿಚಾರ ಗೊತ್ತಾಗಿದೆ. ದುಬೈ,ಸೌದಿ ಅರೇಬಿಯಾ ಸೇರಿದಂತೆ ರಾಜ್ಯದ ಕರಾವಳಿಯ ಕೆಲ ಸ್ಥಳೀಯರ ಬ್ಯಾಂಕ್ ಖಾತೆಗಳಿಂದಲೂ ಆರೋಪಿಗಳ ಖಾತೆಗೆ ಹಣ ವರ್ಗಾವಣೆ ಆಗಿರೋ ವಿವರ ಬಹಿರಂಗಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನ | ಪ್ರವಾಹದಲ್ಲಿ ಕೊಚ್ಚಿ ಹೋದ 9 ಜನ – 18 ಸದ್ಯಸರ ಕುಟುಂಬದ ದುರಂತ ಪ್ರವಾಸ
ಎನ್ಐಎ ಡಿಜಿಪಿ ರಾಹುಲ್ ಹಾಗೂ ಎಸ್ಪಿ ಶಿವಕುಮಾರ್ ಈ ಹತ್ಯೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿದ್ದು ಸದ್ಯ ಎನ್ಐಎ ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ಈ ಹತ್ಯೆ ಪ್ರಕರಣದಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ. ಯಾರೆಲ್ಲ ಫಂಡಿಂಗ್ ಮಾಡಿದ್ದಾರೆ ಅನ್ನೋ ವಿಚಾರ ಮುಂದಿನ ತನಿಖೆಯಲ್ಲಿ ಬಹಿರಂಗಗೊಳ್ಳಲಿದ್ದು ಇನ್ನೊಂದಷ್ಟು ಮಂದಿ ಬಂಧನವಾಗೋ ಸಾಧ್ಯತೆ ಇದೆ. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ