ಟ್ವಿಟ್ಟರ್ ವಾರ್- ವೈಯಕ್ತಿಕ ನಿಂದನೆ ವಿರುದ್ಧ ಗುಡುಗಿದ ದಿನೇಶ್ ಗುಂಡೂರಾವ್

Public TV
1 Min Read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ತಮ್ಮ ಮೇಲೆ ವೈಯಕ್ತಿಕ ನಿಂದನೆ ಮಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಗುಡುಗಿದ್ದಾರೆ.

ಭಾನುವಾರ ಕೇಂದ್ರ ಸಚಿವರಾದ ಅನಂತಕುಮಾರ್ ಹೆಗ್ಡೆ ತಮ್ಮ ಭಾಷಣದಲ್ಲಿ ಹಿಂದೂ ಹುಡುಗಿ ಮುಟ್ಟುವ ಯುವಕನ ಕೈ ಇರಬಾರದು ಎಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದಿನೇಶ್ ಗುಂಡೂರಾವ್, ಕೇಂದ್ರ ಸಚಿವರಾಗಿ ನಿಮ್ಮ ಸಾಧನೆ ಏನು? ಕರ್ನಾಟಕಕ್ಕೆ ನೀವು ನೀಡಿದ ಕೊಡುಗೆ ಏನು? ನಿಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರನ್ನು ನೋಡಿದ್ರೆ ನನಗೆ ನೋವಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು: ಅನಂತ್ ಕುಮಾರ್ ಹೆಗ್ಡೆ

ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಅನಂತಕುಮಾರ್ ಹೆಗ್ಡೆ, ನಾನು ಈ ವ್ಯಕ್ತಿಯ ಪ್ರಶ್ನೆಗಳಿಗೆ ಖಂಡಿತ ಉತ್ತರಿಸುತ್ತೇನೆ. ಮೊದಲು ನಿಮ್ಮ ಅಭಿವೃದ್ಧಿ ಕೆಲಸ, ಸಾಧನೆಯನ್ನು ತಿಳಿಸಿ. ನನಗೆ ಗೊತ್ತಿರುವ ಹಾಗೆ ಮುಸ್ಲಿಂ ಹುಡುಗಿ ಹಿಂದೆ ಓಡಿ ಹೋದವರು ನೀವು ಎಂದು ವೈಯಕ್ತಿಕವಾಗಿ ಟೀಕಿಸಿದ್ದರು.

ಇಂದು ಬೆಳಗ್ಗೆ ಕೇಂದ್ರ ಸಚಿವರ ಟ್ವೀಟ್ ಉತ್ತರ ನೀಡಿರುವ ದಿನೇಶ್ ಗುಂಡೂರಾವ್, ಇಂತಹ ವೈಯಕ್ತಿಕ ವಿಷಯಗಳನ್ನ ಬಳಸಿ ಕೆಳಮಟ್ಟದಲ್ಲಿ ಟೀಕಿಸುವುದನ್ನು ನಿಲ್ಲಿಸಿ. ಇದು ನಿಮ್ಮಲ್ಲಿರುವ ಸಂಸ್ಕೃತಿಯನ್ನು ತೋರಿಸುತ್ತದೆ. ಕೆಳಮಟ್ಟದಲ್ಲಿ ಟೀಕಿಸುತ್ತಿರುವ ಕೇಂದ್ರ ಸಚಿವರಿಗೆ ಹಿಂದೂ ಧರ್ಮದ ಜ್ಞಾನ ಇಲ್ಲ ಎಂಬುವುದು ತಿಳಿಯುತ್ತದೆ. ಇನ್ನು ಸಮಯವಿದ್ದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಓರ್ವ ಗಣ್ಯ ವ್ಯಕ್ತಿಯಾಗಲು ಪ್ರಯತ್ನಿಸಿ ಎಂದು ಗುಡುಗಿದ್ದಾರೆ.

ಕೇಂದ್ರ ಸಚಿವರ ಟ್ವೀಟ್‍ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ರಾಜಕೀಯ ಕೆಸರೆರಚಾಟದಲ್ಲಿ ಪತ್ನಿಯರ ವಿಷಯ ಪ್ರಸ್ತಾಪಿಸಿ ನಿಂದನೆ ಮಾಡೋದು ಸರಿಯಲ್ಲ ಎಂದು ಬಹುತೇಕರು ಟ್ವೀಟ್ ಮಾಡಿದ್ರೆ, ದಿನೇಶ್ ಗುಂಡೂರಾವ್ ಅವರೇ ನಿಮ್ಮ ಸಾಧನೆಗಳನ್ನು ತಿಳಿಸಿ ಬೇರೆಯವರನ್ನು ಪ್ರಶ್ನೆ ಮಾಡಿ ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *