11 ತಿಂಗ್ಳಲ್ಲೇ ಸಿಎಂ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೆ ಅಂದ್ರು ಸಿದ್ದರಾಮಯ್ಯ..!

Public TV
2 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಮಧ್ಯೆ ಟ್ವಿಟ್ಟರ್ ವಾರ್ ನಡೆದಿದ್ದು, ಮಾಜಿ ಸಿಎಂ ಅವರು ಡಿವಿಎಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂಬ ಮಾಜಿ ಸಿಎಂ ಟ್ವೀಟ್ ಗೆ ಸಚಿವರು ಪ್ರತಿಕ್ರಿಯಿಸಿದ್ದರು. ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ. ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ ಅಂತ ತಿರುಗೇಟು ನೀಡಿದ್ದರು. ಇದಕ್ಕೆ ರೀಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎಷ್ಟೆಂದರೂ ನೀವು 11 ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿ ಹೋದವರಲ್ಲವೇ ಅಂತ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ನಲ್ಲೇನಿದೆ..?
ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ. ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ?

ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವುದು ಒಂದನ್ನು ಬಿಟ್ಟು ವಿರೋಧ ಪಕ್ಷವಾಗಿ ಬಿಜೆಪಿ ಇಷ್ಟು ದಿನ ಬೇರೆ ಏನು ಮಾಡಿದೆ ಅಂತ ಪ್ರಶ್ನಿಸಿ ಬಿಜೆಪಿ ಫಾರ್ ಕರ್ನಾಟಕ ಟ್ವಿಟ್ಟರ್ ಅಕೌಂಟ್ ಗೆ ಟ್ಯಾಗ್ ಮಾಡಿದ್ದರು.

ಡಿವಿಎಸ್ ಟ್ವೀಟ್ ನಲ್ಲೇನಿದೆ..?
ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ . ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ . ಮುಲಾಜಿನ ಸರ್ಕಾರ ನಡೆಸಲು ಮುಖ್ಯಮಂತ್ರಿಗಳಿಗೆ ಕೈ ಜೋಡಿಸಿ, ಕನ್ನಡಿಗರು ಮುಗ್ಧರು ಮೂರ್ಖರಲ್ಲ ನಿಮ್ಮ ಗಿಲೀಟು ಮಾತು ನಂಬಲು ಅಂತ ಡಿವಿಎಸ್ ರೀಟೀಟ್ ಮಾಡಿದ್ದರು.

ಇದಕ್ಕೆ ಮತ್ತೆ ಟೀಟ್ವೀಟ್ ಮಾಡಿದ ಮಾಜಿ ಸಿಎಂ “ಡಿವಿಎಸ್ ಅವರೇ, ನಿಮ್ಮ ಅನುಭವವನ್ನು ಸರಿಯಾಗಿ ಹೇಳಿದ್ದೀರಿ, ‘ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ…’ ಎಷ್ಟೆಂದರೂ, ಹನ್ನೊಂದು ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೇ ನೀವು ಅಂತ ಬರೆದು ಕೇಂದ್ರ ಸಚಿವರಿಗೆ ಟ್ಯಾಗ್ ಮಾಡಿದ್ದಾರೆ.

ಈ ಮೂಲಕ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *