ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ – ಇಬ್ಬರು ಪೊಲೀಸ್ ವಶಕ್ಕೆ

Public TV
1 Min Read

ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಶಹಾಬಂದರ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ(25), ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಿವಾಸಿ ನಾಗರಾಜ ದ್ಯಾಮಪ್ಪ ಕಟಾಬಳಿ(21) ಬಂಧಿತರು. ಇದನ್ನೂ ಓದಿ: ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್‌

ಇತ್ತೀಚೆಗೆ ಹಾಲಪ್ಪ ಹಾಗೂ ದ್ಯಾಮಪ್ಪ ಶಹಬಂದರ ಕ್ರಾಸ್‌ನ ವಾಲ್ಮೀಕಿ ಸರ್ಕಲ್ ಬಳಿ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನ ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು. ಇದನ್ನೂ ಓದಿ: ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

ವಿಷಯ ತಿಳಿದ ಯಮಕನಮರಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ (Hamakanamardi Police Station) ಪ್ರಕರಣ ದಾಖಲಾಗಿದೆ.

Share This Article