ಬೈಕ್‍ನಲ್ಲಿ ಗಾಂಜಾ ಸಾಗಾಣೆ ಮಾಡ್ತಿದ್ದ ಇಬ್ಬರ ಬಂಧನ

Public TV
1 Min Read

ಮೈಸೂರು: ಬೈಕ್‍ನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಗ್ರಾಮದ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರವೀಣ್ (24) ಮತ್ತು ರವಿ (26) ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ 2 ಕೆಜಿ ಗಾಂಜಾ ವಶ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ನಂಜನನಾಯಕನಹಳ್ಳಿ ಗ್ರಾಮದ ರಾಜು ರೆಡ್ಡಿ ಎಂಬವರ ಜಮೀನಿನಲ್ಲಿ ಬೆಳೆಯಲಾಗಿದೆ. ಇವರಿಬ್ಬರಿಗೂ ಗಾಂಜಾ ಸರಬರಾಜು ಮಾಡಿದ್ದ ರಾಜು ರೆಡ್ಡಿಯನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಘಟನೆ ಸಂಬಂಧಪಟ್ಟಂತೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *