ಕಂಪ್ಲಿ ಸೇತುವೆ ಬಳಿ ಒಂದರ ಹಿಂದೆ ಒಂದರಂತೆ ಎರಡು ಮೊಸಳೆಗಳು ಪತ್ತೆ!

Public TV
1 Min Read

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಬಳಿಯ ತುಂಗಭದ್ರಾ ನದಿ ನೀರಿನ ರಭಸಕ್ಕೆ ಮೊಸಳೆಗಳು ಹೊರ ಬಂದಿವೆ. ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಟ್ಟ ಹಿನ್ನೆಲೆಯಲ್ಲಿ ಕಂಪ್ಲಿ ಸೇತುವೆ ಕೆಳಗೆ ಎರಡು ಮೊಸಳೆಗಳು ಹೊರಬಂದಿದೆ.

ಒಂದರ ಹಿಂದೆ ಮತ್ತೊಂದರಂರೆ ಎರಡು ಮೊಸಳೆ ಪತ್ತೆಯಾಗಿದ್ದು, ಮತ್ತಷ್ಟು ಮೊಸಳೆ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಮೊಸಳೆಗಳ ಫೋಟೋವನ್ನು ಸೆರೆ ಹಿಡಿದಿದ್ದಾರೆ. ಅಲ್ಲದೇ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಿದ ಬೆನ್ನಲ್ಲೇ ಗುರುವಾರ ಕೊಪ್ಪಳದ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಆನೆಗೊಂದಿ- ಕಡೆಬಾಗಿಲು ಸೇತುವೆ ಸಮೀಪದಲ್ಲೇ ಮೊಸಳೆ ಕಾಣಿಸಿಕೊಂಡಿದೆ. ಸಾರ್ವಜನಿಕರು ಇದರ ವಿಡಿಯೋ ಮಾಡಿದ್ದಾರೆ. ಜನ ಸಾಮಾನ್ಯರು ಓಡಾಡುವ ಸ್ಥಳದಲ್ಲೇ ಮೊಸಳೆ ಕಾಣಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *