ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

Public TV
2 Min Read

ಬೆಂಗಳೂರು: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ ಉಳಿದಿದ್ದು, ಹಲವು ವಲಯಗಳಿಂದ ಇನ್ನೂ ಪರಿಪೂರ್ಣ ಬೆಂಬಲ ಸಿಕ್ಕಿಲ್ಲ. ಈ ಪರಿಣಾಮ ಬಂದ್ ಯಶಸ್ವಿಗೊಳಿಸೋಕೆ ಕನ್ನಡಪರ ಸಂಘಟನೆಗಳು ಹರಸಾಹಸ ಪಡುತ್ತಿವೆ.

ಡಿ.31ರ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಅದಕ್ಕೆ ಎಲ್ಲ ಕಡೆಯಿಂದ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಪರಿಣಾಮ ಕನ್ನಡಪರ ಸಂಘಟನೆಗಳು ಬಂದ್ ಯಶಸ್ವಿಗೊಳಿಸೋಕೆ ಪಣತೊಟ್ಟಿವೆ. ಬಂದ್ ಗೆ ಬೆಂಬಲ ಕೋರಿ ಕೆಲ ಸಂಘಟನೆಗಳಿಂದ ರ‍್ಯಾಲಿ ಮಾಡುತ್ತಿವೆ. ಮತ್ತೆ ಕೆಲ ಸಂಘಟನೆಗಳಿಂದ ಬಂದ್ ಗೆ ಬೆಂಬಲ ಬೇಡ ಎಂದು ತೀರ್ಮಾನಿಸಲು ಇಂದು ಸಭೆ ಕರೆಯಲಾಗಿದೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ 

ಬಂದ್ ಗೆ ಬೆಂಬಲ ಬೇಡ ಎಂದು ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳಿಂದ ಡಿ.30ಕ್ಕೆ ನಗರದಲ್ಲಿ ರ‍್ಯಾಲಿ ಮಾಡಲು ನಿರ್ಧರಿಸಲಾಗಿದೆ. ಇನ್ನು ಹಲವು ಸಂಘಟನೆಗಳು ನೈತಿಕ ಬೆಂಬಲ ನೀಡುವುದಾಗಿ ಘೋಷಿಸಿವೆ. ನೈತಿಕ ಬೆಂಬಲ ಬೇಡ ಸಂಪೂರ್ಣ ಬೆಂಬಲ ಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಹೋಟೆಲ್, ಪಬ್, ಬಾರ್ ಮಾಲೀಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಾವು ನೈತಿಕ ಬೆಂಬಲ ನೀಡುತ್ತೇವೆ ಎಂದು ತಿಳಿಸಿವೆ. ಹೀಗಾಗಿ ಕನ್ನಡಪರ ಸಂಘಟನೆಗಳು ನೈತಿಕ ಬೆಂಬಲಕ್ಕೆ ಅಸಮಾಧಾನ ವ್ಯಕ್ತಪಡಿಸಿವೆ.

ಹಲವು ಗೊಂದಲಗಳ ನಡುವೆ ಬಂದ್ ನ್ನು ಯಶಸ್ವಿಗೊಳಿಸಲೇಬೇಕಾದ ಒತ್ತಡದಲ್ಲಿ ಕನ್ನಡಪರ ಸಂಘಟನೆಗಳು ಇದ್ದು, ರಾಜ್ಯದಲ್ಲಿ ತಮ್ಮ ಶಕ್ತಿ ಸಾಬೀತಾಗಬೇಕಾದರೆ ಬಂದ್ ಯಶಸ್ವಿಯಾಗಲೇಬೇಕು ಎಂದು ಪಣತೊಟ್ಟಿವೆ. ಇದನ್ನೂ ಓದಿ: ಗ್ರಾಪಂ ಸದಸ್ಯ 15 ಲಕ್ಷ ಲಂಚ ಪಡೆಯುವುದು ಭ್ರಷ್ಟಾಚಾರವಲ್ಲ: ಬಿಜೆಪಿ ಸಂಸದ

ಮೊನ್ನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸತ್ಯಾಗ್ರಹ, ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ಮನವಿ, ಮಾಲ್ ಗಳಲ್ಲಿ ರ‍್ಯಾಲಿ, ಮಲ್ಲೇಶ್ವರಂನಲ್ಲಿ ಉರುಳು ಸೇವೆ ಮಾಡಿ ಬಂದ್ ಗೆ ಕನ್ನಡಪರ ಸಂಘಟನೆಗಳು ಬೆಂಬಲ ಕೋರಿವೆ. ಈ ವೇಳೆ 100 ಕ್ಕೂ ಹೆಚ್ಚು ಹೋರಾಟಗಾರರಿಂದ ಉರುಳು ಸೇವೆ ಮೂಲಕ ಮನವಿ ಮಾಡಲಾಯಿತು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿರುವುದರಿಂದ ಬಂದ್ ಮಾಡಲೇಬೇಕು ಎಂದು ಸಂಘಟನೆಗಳು ಪಣತೊಟ್ಟಿವೆ.

Share This Article
Leave a Comment

Leave a Reply

Your email address will not be published. Required fields are marked *