ಚಿತ್ರದುರ್ಗ| ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ

Public TV
1 Min Read

ಚಿತ್ರದುರ್ಗ: ವಿದ್ಯುತ್ ತಂತಿ (Electric Wire) ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ. ಕೃಷ್ಣಾಪುರ ಗ್ರಾಮದ ಜಯರಾಂ ಎಂಬವರ ಅಡಿಕೆ ತೋಟದಲ್ಲಿ ಘಟನೆ ನಡೆದಿದ್ದು, ಕಳೆದ ರಾತ್ರಿ ಶ್ರೀಗಂಧ ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ರಾಘಣ್ಣ

ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದು, ಕಳ್ಳತನಕ್ಕೆ ಆಗಮಿಸಿ ಈ ರೀತಿ ಸಾವಿಗೀಡಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ರಾಜಸ್ತಾನ| ಬಸ್-ರಿಕ್ಷಾ ನಡುವೆ ಭೀಕರ ಅಪಘಾತ; 8 ಮಕ್ಕಳು ಸೇರಿ 12 ಮಂದಿ ಸಾವು

Share This Article